ಬ್ರೇಕಿಂಗ್ ನ್ಯೂಸ್
15-10-22 09:52 pm Mangalore Correspondent ಕರಾವಳಿ
ಉಳ್ಳಾಲ, ಅ.15 : ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಅವ್ಯವಹಾರಗಳೇ ತುಂಬಿದ್ದು, ಭಂಡಾರಬೈಲು ಸಮೀಪ ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ್ದಲ್ಲದೆ ರೈತರ ಕುಮ್ಕಿ ಜಾಗದ ಕುರಿತಾಗಿ ಸರಿಯಾದ ಕಾನೂನು ಜಾರಿ ಬರೋದಕ್ಕೂ ಮುನ್ನವೇ ರೈತರೊಬ್ಬರ ಕುಮ್ಕಿ ಜಾಗವನ್ನು ಸರಕಾರಿ ಜಾಗ ಎಂದು ಅತಿಕ್ರಮಣ ಮಾಡಿದ್ದು ಅಪರಾಧಿಗಳಿಗೆ ಕಾನೂನು ಪ್ರಕಾರ ತಕ್ಕ ಶಾಸ್ತಿ ಆಗುವ ತನಕ ಹೋರಾಟ ನಿಲ್ಲದು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ ಹೇಳಿದರು.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಆಡಳಿತವು ರೈತ ವಿರೋಧಿ ಆಡಳಿತ ನಡೆಸುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಭ್ರಷ್ಟರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಉಳ್ಳಾಲ ಘಟಕದ ವತಿಯಿಂದ ಮುನ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಶನಿವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೈತರು ಒಗ್ಗಟ್ಟಾಗಿ ಜಾಗೃತರಾಬೇಕು. ಪರಿಸ್ಥಿತಿ ಹೇಗಿದೆ ಎಂದರೆ ಈ ಭ್ರಷ್ಟರಿಂದಾಗಿ ನಮ್ಮ ಭೂಮಿಯನ್ನು ಉಳಿಸಲು ನಾವು ಹೋರಾಟ ಮಾಡುವಂತಾಗಿದೆ ಎಂದರು. ಪಂಚಾಯತ್ ಅಧಿಕಾರಿಗಳಿಗೆ ಆರೋಗ್ಯ ಕೆಟ್ಟರೆ ಅವರ ಆಸ್ಪತ್ರೆ ಖರ್ಚನ್ನು ಸರಕಾರ ಭರಿಸುತ್ತದೆ, ಆದರೆ ದೇಶದ ಜನತೆಯ ಹೊಟ್ಟೆ ತುಂಬಿಸುವ ರೈತನ ಗೋಳನ್ನು ಯಾರಲ್ಲಿ ಹೇಳೋದು ಎಂದು ಪ್ರಶ್ನಿಸಿದರು.

ರೈತರ ಕುಮ್ಕಿ ಜಾಗದ ಕುರಿತಾದ ನೂತನ ಕಾನೂನು ಶೀಘ್ರದಲ್ಲೇ ಜಾರಿಗೆ ಬರಲಿದೆ. ಕುಮ್ಕಿ ಹಕ್ಕು ಇತ್ಯರ್ಥವಾಗುವುದಕ್ಕೆ ಮುನ್ನವೇ ಸರಕಾರಿ ಜಮೀನು ಎಂದು ಅತಿಕ್ರಮಣ ಮಾಡಿರುವ ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಭ್ರಷ್ಟಾಚಾರಗೈದವರೆಲ್ಲರಿಗೂ ಶಿಕ್ಷೆ ಆಗಲಿದೆ ಎಂದರು.
ಕಿಸಾನ್ ಸಂಘ ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಶೆಟ್ಟಿ, ಮುಖಂಡರಾದ ಪ್ರೇಮಚಂದ್ರ ಶೆಟ್ಟಿ, ಶಿವರಾಜ್ ಕಾವ, ಬಾಬು ಶ್ರೀಶಾಸ್ತಾ ಕಿನ್ಯ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Mangalore Illegal sand mining in Ullal, farmers land being used for mining at Munnuru, farmers protest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm