ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm