ಬ್ರೇಕಿಂಗ್ ನ್ಯೂಸ್
16-10-22 04:48 pm Mangalore Correspondent ಕರಾವಳಿ
ಮಂಗಳೂರು, ಅ.16 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ದ್ವಾರದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯ ಸಿಬಂದಿಗೆ ಮಾತ್ರ ಪ್ರವೇಶ ಎಂದು ಬೋರ್ಡ್ ಹಾಕಲಾಗಿದೆ. ಈ ಬಗ್ಗೆ ವಕೀಲರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಲಯ ಕಟ್ಟಡವು ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದ್ದರೂ ಜಿಲ್ಲಾ ನ್ಯಾಯಾಧೀಶರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರವನ್ನು ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ ನಿರ್ಬಂಧ ಹಾಕಿರುವುದು ವಕೀಲ ಸಮುದಾಯದಲ್ಲಿ ಅಸಮಾಧಾನ ತರಿಸಿದೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯವಾದಿಗಳಿಗೂ ಪ್ರವೇಶ ನಿರ್ಬಂಧಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಈ ಬಗ್ಗೆ ಶನಿವಾರ ಕಟ್ಟಡದ ಮುಂಭಾಗದ ಪ್ರಮುಖ ದ್ವಾರದಲ್ಲಿ ಈ ರೀತಿ ಬೋರ್ಡ್ ಹಾಕಿರುವುದು ತಿಳಿಯುತ್ತಿದ್ದಂತೆ ವಕೀಲರ ಸಂಘದ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಿದ್ದಾರೆ. ಭದ್ರತೆ ಸಲುವಾಗಿ ಈ ರೀತಿಯ ನಿರ್ಣಯ ಮಾಡಲಾಗಿದೆ. ಅದನ್ನು ನೀವು ಪ್ರಶ್ನೆ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆಂದು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ತಿಳಿಸಿದ್ದಾರೆ.
ಈ ಬಗ್ಗೆ ಅ.18ರಂದು ವಕೀಲರ ಸಂಘದ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ವಕೀಲರು ನ್ಯಾಯಾಂಗದ ಭಾಗ ಆಗಿರುವಾಗ 30 ಮಂದಿ ನ್ಯಾಯಾಧೀಶರ ಸಲುವಾಗಿ ಮುಖ್ಯ ಪ್ರವೇಶವನ್ನೇ ನಿರ್ಬಂಧಿಸಿದ್ದು ಸರಿಯಲ್ಲ. ಈ ರೀತಿ ನಿರ್ಣಯ ಯಾಕೆ ಕೈಗೊಂಡಿದ್ದಾರೆ ಎನ್ನುವುದೂ ಸ್ಪಷ್ಟವಾಗಿಲ್ಲ. ವಕೀಲರು, ಸಾರ್ವಜನಿಕರಿಗೂ ನ್ಯಾಯಾಲಯ ಪ್ರವೇಶಕ್ಕೆ ಬೇರೆ ಬಾಗಿಲು ಮಾಡುತ್ತಾರೆಯೇ ಎಂದವರು ಪ್ರಶ್ನಿಸಿದ್ದಾರೆ.
Mangalore Lawyers go angry after the court main door reserved only for Judicial officers only and not for any advocates.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm