ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.

ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm