ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.

ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am