ಬ್ರೇಕಿಂಗ್ ನ್ಯೂಸ್
17-10-22 03:33 pm Mangalore Correspondent ಕರಾವಳಿ
ಮಂಗಳೂರು, ಅ.17 : ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ.
ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ ನಿವಾಸಿ ನಾರಾಯಣ ಎಂಬವರ ಜೊತೆಗೆ ಪೂಜೆಯ ಸಾಮಾನು ತರಲೆಂದು ಬೈಕಿನಲ್ಲಿ ಮಂಗಳೂರಿಗೆ ಬಂದಿದ್ದ.
ಇವರು ಸಾಮಾನು ಖರೀದಿಸಿ ಉರ್ವಾ- ಲೇಡಿಹಿಲ್ ಕಡೆಯಿಂದ ಲಾಲ್ ಬಾಗಿನತ್ತ ಬರುತ್ತಿದ್ದಾಗ, ಹಿಂದಿನಿಂದ ಯಮದೂತನಂತೆ ಧಾವಿಸಿ ಬಂದ ಖಾಸಗಿ ಬಸ್ ಪಬ್ಬಾಸ್ ಎದುರಿನ ಅಶ್ವತ್ಧ ಕಟ್ಟೆಯ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ರಕ್ಷಣ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿಂದಲೇ ಬಸ್ ಹರಿದಿದೆ. ಬೈಕ್ ಸವಾರ ನಾರಾಯಣ ಎಡದ ಭಾಗಕ್ಕೆ ವಾಲಿ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ರಕ್ಷಣ್ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾನೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್, ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎಡ ಭಾಗದಿಂದ ಸಂಚರಿಸಿದ್ದರಿಂದ ಅಪಘಾತ ಆಗಿದೆ ಎನ್ನಲಾಗಿದೆ. ಸಂಚಾರಿ ವಿಭಾಗದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a bus and a two-wheeler claimed the life of a 12-year-old boy on Monday October 17 at Lalbagh in Mangalore. The deceased is identified as Dhanu from Neermarga.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm