ಬ್ರೇಕಿಂಗ್ ನ್ಯೂಸ್
17-10-22 10:57 pm Mangalore Correspondent ಕರಾವಳಿ
ಮಂಗಳೂರು, ಅ.17 : ಸುರತ್ಕಲ್ ಟೋಲ್ ಗೇಟ್ ವಿರುದ್ಧ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಟೋಲ್ ಗೇಟ್ ಸುತ್ತಮುತ್ತ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿ ಸಮಿತಿಯ ಸವಾಲನ್ನು ಎದುರಿಸಲು ಜಿಲ್ಲಾಡಳಿತ ಪೊಲೀಸ್ ಸರ್ಪಗಾವಲನ್ನು ಹಾಕಿದೆ. ಸೋಮವಾರ ಸಂಜೆಯಿಂದಲೇ ಟೋಲ್ ಗೇಟ್ ಎರಡೂ ಬದಿಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಆಮೂಲಕ ವಿರೋಧಿ ಹೋರಾಟಕ್ಕಾಗಿ ಜನರು ಸೇರದಂತೆ ಬೆದರಿಸುವ ತಂತ್ರ ಹೆಣೆಯಲಾಗಿದೆ.
ಈಗಾಗಲೇ ನೇರ ಕಾರ್ಯಾಚರಣೆ ಹೆಸರಲ್ಲಿ ಜನರನ್ನು ಸೇರಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಚಾರ ಅಭಿಯಾನ ನಡೆಸಿದೆ. ಇದರ ನಡುವೆ, ಪ್ರಮುಖರಿಗೆ ನೋಟೀಸ್ ಕೊಟ್ಟು ಬಾಂಡ್ ನೀಡುವ ಬಗ್ಗೆ ಎಚ್ಚರಿಕೆ ನೀಡಿದೆ. ಪೊಲೀಸರು ರಾತ್ರೋರಾತ್ರಿ ಮನೆಗೆ ನುಗ್ಗಿ ನೋಟಿಸ್ ಕೊಟ್ಟಿರುವ ವಿಚಾರ ವಿರೋಧಕ್ಕೆ ಕಾರಣ ಆಗಿರುವಾಗಲೇ ವಿವಿಧ ಪಕ್ಷಗಳ ನಾಯಕರು ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ. ಜೊತೆಗೆ ಬಿಜೆಪಿ ಸರಕಾರದ ನಿಲುವನ್ನೂ ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಕೂಡ ಮುತ್ತಿಗೆ ಹೋರಾಟ ಬೆಂಬಲಿಸಿ ತಮ್ಮ ಕಾರ್ಯಕರ್ತರಿಗೆ ನೇರ ಕಾರ್ಯಾಚರಣೆಗೆ ಕರೆ ನೀಡಿದ್ದಾರೆ.
ಇದರಿಂದಾಗಿ ಜಿಲ್ಲಾಡಳಿತ ಪೊಲೀಸರನ್ನು ನಿಯೋಜಿಸಿ ಜನರು ಟೋಲ್ ಗೇಟ್ ಬಳಿ ಸೇರದಂತೆ ಮಾಡಲು ತಂತ್ರ ಹೆಣೆದಿದೆ. ಇದಕ್ಕಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್, ಟೋಲ್ ಗೇಟ್ ಪರವಾಗಿ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಈ ನಿಲುವನ್ನು ಖಂಡಿಸಿರುವ ಟೋಲ್ ಗೇಟ್ ಹೋರಾಟಗಾರರು, ಧನದಾಹಿ ನವಯುಗ್ ಕಂಪನಿಗೆ ಪೊಲೀಸರು ಸೆಕ್ಯುರಿಟಿ ಕೊಟ್ಟಿದ್ದಾರೆ. ಜನರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Protest over illegal toll, Hundreds of police deployed at Surathkal toll in Mangalore. The police have ordered the protesters to furnish a bond for Rs 2 lacs along with a government bail and also to report themselves at the Police Commissioner's office on Monday.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm