ಬ್ರೇಕಿಂಗ್ ನ್ಯೂಸ್
18-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.18: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ. ಈಗಾಗಲೇ ಪ್ರಕರಣದಲ್ಲಿ ರಿಯಾಜ್ ಎಂಬ ಯುವಕನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ತನಿಖೆಯ ಸಂದರ್ಭದಲ್ಲಿ ಕೇವಲ ಓವರ್ ಟೇಕ್ ಮಾಡುವ ವಿಚಾರದಲ್ಲಿ ಬೈಗುಳ ನೀಡಿದ್ದೇನೆ ಹೊರತು ವೈಯಕ್ತಿಕ ದ್ವೇಷ ಇಲ್ಲವೆಂದು ತಿಳಿದುಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿದ್ದ ಎಸ್ಪಿ ಋಷಿಕೇಷ್ ಸೋನವಾಣೆ, ಪ್ರಕರಣದಲ್ಲಿ ಯಾವುದೇ ಶಸ್ತ್ರ ಬಳಕೆಯಾಗಿಲ್ಲ. ತಲವಾರು ಕಂಡುಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ಓವರ್ ಟೇಕ್ ವಿಚಾರದಲ್ಲಿ ಘಟನೆ ನಡೆದಿತ್ತು. ಆರೋಪಿ ರಿಯಾಜ್ ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲ. ಶಾಸಕರು ಪ್ರಯಾಣಿಸುತ್ತಿದ್ದ ಖಾಸಗಿ ಕಾರು ಓವರ್ ಟೇಕ್ ಮಾಡಲು ಬಿಡಲಿಲ್ಲವೆಂದು ಹಿಂದಿನಿಂದ ತೆರಳುತ್ತಿದ್ದ ಸ್ಕಾರ್ಪಿಯೋ ಚಾಲಕ ರಿಯಾಜ್ ಫರಂಗಿಪೇಟೆಯಲ್ಲಿ ಶಾಸಕರಿದ್ದ ವಾಹನದ ಚಾಲಕನಿಗೆ ದಬಾಯಿಸಿದ್ದರು. ಶಾಸಕರಿಗೆ ಬೆದರಿಕೆ ಹಾಕುವ ವಿಚಾರ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಮರುದಿನ ಒತ್ತಡಕ್ಕೆ ಒಳಗಾಗಿಯೋ ಏನೋ, ಆರೋಪಿ ಕಾರಿನಲ್ಲಿ ಸ್ಪಾನರ್ ಪತ್ತೆಯಾಗಿತ್ತು. ಆತ ಬೆದರಿಕೆ ಹಾಕುವ ಸಂದರ್ಭದಲ್ಲಿ ತಲವಾರಿನಂತೆ ಸ್ಪಾನರ್ ತೋರಿಸಿದ್ದ ಅನ್ನುವುದನ್ನು ಎಸ್ಪಿ ಹೇಳಿದ್ದರು.
ಎಸ್ಪಿ ನೀಡಿದ್ದ ಸ್ಪಷ್ಟನೆಯಿಂದ ಶಾಸಕ ಹರೀಶ್ ಪೂಂಜಾ ತೀವ್ರ ಮುಜುಗರಕ್ಕೊಳಕ್ಕೆ ಒಳಗಾಗಿದ್ದರು. ಹರೀಶ್ ಪೂಂಜ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿದ್ದ ದೂರಿನಲ್ಲಿ ಆರೋಪಿ ತಲವಾರು ತೋರಿಸಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿತ್ತು. ಈ ನಡುವೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಹರೀಶ್ ಪೂಂಜಾ, ಕಾರಿನಲ್ಲಿ ಒಬ್ಬನೇ ಇದ್ದ, ಆತನೇ ಕಾರು ಚಲಾಯಿಸಿಕೊಂಡಿದ್ದಲ್ಲದೆ ತಲವಾರು ಹಿಡಿದುಕೊಂಡಿದ್ದ ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ಟ್ರೋಲ್ ಆಗಿತ್ತು. ಇದೀಗ ರಾಜ್ಯ ಸರಕಾರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ಒಪ್ಪಿಸಿದೆ. ಸಿಐಡಿ ತನಿಖೆಯಲ್ಲಿ ಸ್ಪಾನರ್ ಜೊತೆಗೆ ಹೊಸ ವಿಚಾರ ಏನು ಬೆಳಕಿಗೆ ಬರುತ್ತದೆ ಅನ್ನೋದು ನೋಡಬೇಕು.
Mangalore Life threat to MLA Harish Poonja, case handed over to CID for investigation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm