ಬ್ರೇಕಿಂಗ್ ನ್ಯೂಸ್
18-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.18: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ. ಈಗಾಗಲೇ ಪ್ರಕರಣದಲ್ಲಿ ರಿಯಾಜ್ ಎಂಬ ಯುವಕನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ತನಿಖೆಯ ಸಂದರ್ಭದಲ್ಲಿ ಕೇವಲ ಓವರ್ ಟೇಕ್ ಮಾಡುವ ವಿಚಾರದಲ್ಲಿ ಬೈಗುಳ ನೀಡಿದ್ದೇನೆ ಹೊರತು ವೈಯಕ್ತಿಕ ದ್ವೇಷ ಇಲ್ಲವೆಂದು ತಿಳಿದುಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿದ್ದ ಎಸ್ಪಿ ಋಷಿಕೇಷ್ ಸೋನವಾಣೆ, ಪ್ರಕರಣದಲ್ಲಿ ಯಾವುದೇ ಶಸ್ತ್ರ ಬಳಕೆಯಾಗಿಲ್ಲ. ತಲವಾರು ಕಂಡುಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ಓವರ್ ಟೇಕ್ ವಿಚಾರದಲ್ಲಿ ಘಟನೆ ನಡೆದಿತ್ತು. ಆರೋಪಿ ರಿಯಾಜ್ ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲ. ಶಾಸಕರು ಪ್ರಯಾಣಿಸುತ್ತಿದ್ದ ಖಾಸಗಿ ಕಾರು ಓವರ್ ಟೇಕ್ ಮಾಡಲು ಬಿಡಲಿಲ್ಲವೆಂದು ಹಿಂದಿನಿಂದ ತೆರಳುತ್ತಿದ್ದ ಸ್ಕಾರ್ಪಿಯೋ ಚಾಲಕ ರಿಯಾಜ್ ಫರಂಗಿಪೇಟೆಯಲ್ಲಿ ಶಾಸಕರಿದ್ದ ವಾಹನದ ಚಾಲಕನಿಗೆ ದಬಾಯಿಸಿದ್ದರು. ಶಾಸಕರಿಗೆ ಬೆದರಿಕೆ ಹಾಕುವ ವಿಚಾರ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಮರುದಿನ ಒತ್ತಡಕ್ಕೆ ಒಳಗಾಗಿಯೋ ಏನೋ, ಆರೋಪಿ ಕಾರಿನಲ್ಲಿ ಸ್ಪಾನರ್ ಪತ್ತೆಯಾಗಿತ್ತು. ಆತ ಬೆದರಿಕೆ ಹಾಕುವ ಸಂದರ್ಭದಲ್ಲಿ ತಲವಾರಿನಂತೆ ಸ್ಪಾನರ್ ತೋರಿಸಿದ್ದ ಅನ್ನುವುದನ್ನು ಎಸ್ಪಿ ಹೇಳಿದ್ದರು.
ಎಸ್ಪಿ ನೀಡಿದ್ದ ಸ್ಪಷ್ಟನೆಯಿಂದ ಶಾಸಕ ಹರೀಶ್ ಪೂಂಜಾ ತೀವ್ರ ಮುಜುಗರಕ್ಕೊಳಕ್ಕೆ ಒಳಗಾಗಿದ್ದರು. ಹರೀಶ್ ಪೂಂಜ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿದ್ದ ದೂರಿನಲ್ಲಿ ಆರೋಪಿ ತಲವಾರು ತೋರಿಸಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿತ್ತು. ಈ ನಡುವೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಹರೀಶ್ ಪೂಂಜಾ, ಕಾರಿನಲ್ಲಿ ಒಬ್ಬನೇ ಇದ್ದ, ಆತನೇ ಕಾರು ಚಲಾಯಿಸಿಕೊಂಡಿದ್ದಲ್ಲದೆ ತಲವಾರು ಹಿಡಿದುಕೊಂಡಿದ್ದ ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ಟ್ರೋಲ್ ಆಗಿತ್ತು. ಇದೀಗ ರಾಜ್ಯ ಸರಕಾರ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ಒಪ್ಪಿಸಿದೆ. ಸಿಐಡಿ ತನಿಖೆಯಲ್ಲಿ ಸ್ಪಾನರ್ ಜೊತೆಗೆ ಹೊಸ ವಿಚಾರ ಏನು ಬೆಳಕಿಗೆ ಬರುತ್ತದೆ ಅನ್ನೋದು ನೋಡಬೇಕು.
Mangalore Life threat to MLA Harish Poonja, case handed over to CID for investigation.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm