ಬ್ರೇಕಿಂಗ್ ನ್ಯೂಸ್
18-10-22 07:57 pm Mangalore Correspondent ಕರಾವಳಿ
ಮಂಗಳೂರು, ಅ.18 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್, ಟೋಲ್ ತೆರವು ಮಾಡಬೇಕು ಎನ್ನುವುದಕ್ಕೆ ನಮ್ಮ ತಕರಾರು ಇಲ್ಲ. ಟೋಲ್ಗೇಟ್ ಸ್ಥಾಪನೆ ವೇಳೆ ಮೊದಲು ವಿರೋಧಿಸಿದ್ದೇ ಬಿಜೆಪಿ ಎಂದು ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ತಾಂತ್ರಿಕ ಅಡಚಣೆಯ ಕಾರಣ ತೆರವು ಕಾರ್ಯ ವಿಳಂಬವಾಗಿದ್ದು, 20 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಾಗಿದ್ದರೂ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಸುರತ್ಕಲ್ ಟೋಲ್ಗೇಟ್ ತೆರವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. 2013ರಲ್ಲಿ ಟೋಲ್ಗೇಟ್ ಆರಂಭವಾದಾಗ ನಾಗರಿಕ ಹಿತರಕ್ಷಣಾ ವೇದಿಕೆಯಡಿ ಮೊದಲು ವಿರೋಧ ವ್ಯಕ್ತಪಡಿಸಲಾಗಿತ್ತು. 2019ರಲ್ಲಿ ತಲಪಾಡಿ ಹಾಗೂ ಹೆಜಮಾಡಿಯಲ್ಲಿ ಟೋಲ್ಗೇಟ್ ಸ್ಥಾಪನೆಯಾಗಿತ್ತು. ಬಿಓಟಿ ಒಪ್ಪಂದ ಪ್ರಕಾರ ಹೆದ್ದಾರಿ ನಿರ್ಮಾಣ ಕೈಗೊಳ್ಳಲಾಗಿದೆ.

ಸುರತ್ಕಲ್ ಟೋಲ್ಗೇಟ್ ತೆರವು ವಿಚಾರದಲ್ಲಿ ಹಲವಾರು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲೂ ಟೋಲ್ಗೇಟ್ ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಇದರ ನಡುವೆಯೂ ಹೋರಾಟಗಾರರು ಕಾರ್ಯಾಚರಣೆ ಇಳಿದಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ನಡೆಸಲು ಯಾವುದೇ ತೊಂದರೆ ಇಲ್ಲ. ಅದು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮಂಗಳವಾರ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಪ್ರತಿಭಟನೆ ನಡೆಸಿದ್ದು ಜಿಲ್ಲಾಡಳಿತ ಮತ್ತು ಶಾಸಕ, ಸಂಸದರಿಗೆ ಧಿಕ್ಕಾರ ಕೂಗಿದ್ದರು. ಭಾರೀ ಹೈಡ್ರಾಮಾದ ಬಳಿಕ ನೂರಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
BJP was the one that stated Surathkal toll was illegal, we don't have any issue says Nalin Kumar Kateel speaking to media persons here in Mangalore.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am