ಬ್ರೇಕಿಂಗ್ ನ್ಯೂಸ್
18-10-22 07:57 pm Mangalore Correspondent ಕರಾವಳಿ
ಮಂಗಳೂರು, ಅ.18 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್, ಟೋಲ್ ತೆರವು ಮಾಡಬೇಕು ಎನ್ನುವುದಕ್ಕೆ ನಮ್ಮ ತಕರಾರು ಇಲ್ಲ. ಟೋಲ್ಗೇಟ್ ಸ್ಥಾಪನೆ ವೇಳೆ ಮೊದಲು ವಿರೋಧಿಸಿದ್ದೇ ಬಿಜೆಪಿ ಎಂದು ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ತಾಂತ್ರಿಕ ಅಡಚಣೆಯ ಕಾರಣ ತೆರವು ಕಾರ್ಯ ವಿಳಂಬವಾಗಿದ್ದು, 20 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಾಗಿದ್ದರೂ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಸುರತ್ಕಲ್ ಟೋಲ್ಗೇಟ್ ತೆರವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. 2013ರಲ್ಲಿ ಟೋಲ್ಗೇಟ್ ಆರಂಭವಾದಾಗ ನಾಗರಿಕ ಹಿತರಕ್ಷಣಾ ವೇದಿಕೆಯಡಿ ಮೊದಲು ವಿರೋಧ ವ್ಯಕ್ತಪಡಿಸಲಾಗಿತ್ತು. 2019ರಲ್ಲಿ ತಲಪಾಡಿ ಹಾಗೂ ಹೆಜಮಾಡಿಯಲ್ಲಿ ಟೋಲ್ಗೇಟ್ ಸ್ಥಾಪನೆಯಾಗಿತ್ತು. ಬಿಓಟಿ ಒಪ್ಪಂದ ಪ್ರಕಾರ ಹೆದ್ದಾರಿ ನಿರ್ಮಾಣ ಕೈಗೊಳ್ಳಲಾಗಿದೆ.

ಸುರತ್ಕಲ್ ಟೋಲ್ಗೇಟ್ ತೆರವು ವಿಚಾರದಲ್ಲಿ ಹಲವಾರು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲೂ ಟೋಲ್ಗೇಟ್ ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಇದರ ನಡುವೆಯೂ ಹೋರಾಟಗಾರರು ಕಾರ್ಯಾಚರಣೆ ಇಳಿದಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ನಡೆಸಲು ಯಾವುದೇ ತೊಂದರೆ ಇಲ್ಲ. ಅದು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮಂಗಳವಾರ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಪ್ರತಿಭಟನೆ ನಡೆಸಿದ್ದು ಜಿಲ್ಲಾಡಳಿತ ಮತ್ತು ಶಾಸಕ, ಸಂಸದರಿಗೆ ಧಿಕ್ಕಾರ ಕೂಗಿದ್ದರು. ಭಾರೀ ಹೈಡ್ರಾಮಾದ ಬಳಿಕ ನೂರಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
BJP was the one that stated Surathkal toll was illegal, we don't have any issue says Nalin Kumar Kateel speaking to media persons here in Mangalore.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm