ಬ್ರೇಕಿಂಗ್ ನ್ಯೂಸ್
19-10-22 06:40 pm Mangalore Correspondent ಕರಾವಳಿ
ಮಂಗಳೂರು, ಅ.19: ಆಕೆಯ ಹೆಸರು ಭಾರ್ಗವಿ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ. ಎಂಟನೇ ಕ್ಲಾಸ್ ಓದ್ತಾ ಇದ್ದ ಭಾರ್ಗವಿ ಮೊನ್ನೆ ಅ.17ರಂದು ಸಂಜೆ ಮನೆಯಿಂದ ಟ್ಯೂಶನ್ ಕ್ಲಾಸಿಗೆಂದು ಹೋಗಿದ್ದವಳು ನಾಪತ್ತೆಯಾಗಿದ್ದಾಳೆ. ಈ ನಡುವೆ, ಆಕೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಶಾಲೆಯಲ್ಲಿ ಮಾರ್ಕು ಕಡಿಮೆ ಬಂದಿದೆಯೆಂದು ಮನೆ ಬಿಟ್ಟು ಹೋಗಿದ್ದಾಳೆ ಎನ್ನಲಾಗುತ್ತಿದೆ. ಹೆತ್ತವರು ಗಾಬರಿಗೊಂಡಿದ್ದು, ಮಗಳನ್ನು ಹುಡುಕಿ ಕೊಡುವಂತೆ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ನಂದಿನಿ ಲೇಔಟ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ನೀಡಿದ್ದಾರೆ. ಸೋಮವಾರ ಸಂಜೆ 4.30ಕ್ಕೆ ತೆರಳಿದ್ದ ಆಕೆ, ಮನೆಯಿಂದ 5 ಸಾವಿರ ರೂಪಾಯಿ ಇಸ್ಕೊಂಡು ಹೋಗಿದ್ದಾಳೆ ಎನ್ನುವುದು ಪೊಲೀಸರಿಗೆ ಮಾಹಿತಿ ಲಭಿಸಿದೆ.



ಮರುದಿನ ಅ.18ರಂದು ನಸುಕಿನ ಮೂರು ಗಂಟೆ ವೇಳೆಗೆ ಭಾರ್ಗವಿ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತ್ಯಕ್ಷ ಆಗಿದ್ದಳು. ಬೆಂಗಳೂರು ಬಸ್ಸಿನಲ್ಲಿ ಬಂದಿದ್ದ ಹುಡುಗಿ ಅಲ್ಲಿಂದ ಸರಿರಾತ್ರಿಯಲ್ಲೇ ಮುಕ್ಕ ಬೀಚ್ ನತ್ತ ಆಟೋದಲ್ಲಿ ತೆರಳಿದ್ದಾಳೆ. ಈಕೆ ಬಸ್ ನಿಲ್ದಾಣಕ್ಕೆ ಬಂದಿರುವುದು ಮತ್ತು ಆಟೋದಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಆನಂತರ, ಆರು ಗಂಟೆ ವೇಳೆಗೆ ಬೀಚ್ ನಿಂದ ಮರಳಿ ಅದೇ ಬಸ್ ನಿಲ್ದಾಣಕ್ಕೆ ಬಂದಿದ್ದ ಹುಡುಗಿ ಆನಂತರ ಎಲ್ಲಿ ಹೋಗಿದ್ದಾಳೆ ಅನ್ನುವುದು ಗೊತ್ತಾಗಿಲ್ಲ. ಕೆಲವರು ಆಕೆ ಮೈಸೂರು ಬಸ್ ಹತ್ತಿದ್ದಾಳೆ, ಬೆಂಗಳೂರಿಗೆ ರಿಟರ್ನ್ ಹೋಗಿದ್ದಾಳೆ ಅಂತ ಹೇಳುತ್ತಿದ್ದಾರೆ. ಈ ಬಗ್ಗೆ ಮಂಗಳೂರಿನ ಪೊಲೀಸರು ಕೂಡ ಹುಡುಕಾಟ ನಡೆಸಿದ್ದಾರೆ.



ಹುಡುಗಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಠಾಣೆಯಲ್ಲಿ ಸಂಪರ್ಕಿಸಿದಾಗ, ಇನ್ನೂ ಹುಡುಗಿ ಸಿಕ್ಕಿಲ್ಲ. ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಮಂಗಳೂರಿಗೆ ಬಂದಾಕೆ, ಬೆಂಗಳೂರಿಗೆ ಮರಳಿ ಬರ್ತಿದ್ದೀನಿ ಅಂತ ತನ್ನ ಸ್ನೇಹಿತೆಗೆ ಕರೆ ಮಾಡಿ ತಿಳಿಸಿದ್ದಾಳೆ ಎನ್ನಲಾಗುತ್ತಿದೆ. ಈ ಕರೆಯ ಜಾಡು ಹಿಡಿದು ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 14 ವರ್ಷದ ಹುಡುಗಿ ಒಬ್ಬಂಟಿಯಾಗಿಯೇ ಮಂಗಳೂರು- ಬೆಂಗಳೂರು ಸುತ್ತಾಡಿದ್ದು ಹೆತ್ತವರನ್ನು ಗಾಬರಿಪಡಿಸಿದೆ.
Missing girl from bangalore found in mangalore, gets down at KSRTC bus stand and goes to Mukka beach by Auto. Bhargavi was missing from Bangalore after her toution.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am