ಬ್ರೇಕಿಂಗ್ ನ್ಯೂಸ್
19-10-22 06:40 pm Mangalore Correspondent ಕರಾವಳಿ
ಮಂಗಳೂರು, ಅ.19: ಆಕೆಯ ಹೆಸರು ಭಾರ್ಗವಿ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ. ಎಂಟನೇ ಕ್ಲಾಸ್ ಓದ್ತಾ ಇದ್ದ ಭಾರ್ಗವಿ ಮೊನ್ನೆ ಅ.17ರಂದು ಸಂಜೆ ಮನೆಯಿಂದ ಟ್ಯೂಶನ್ ಕ್ಲಾಸಿಗೆಂದು ಹೋಗಿದ್ದವಳು ನಾಪತ್ತೆಯಾಗಿದ್ದಾಳೆ. ಈ ನಡುವೆ, ಆಕೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಶಾಲೆಯಲ್ಲಿ ಮಾರ್ಕು ಕಡಿಮೆ ಬಂದಿದೆಯೆಂದು ಮನೆ ಬಿಟ್ಟು ಹೋಗಿದ್ದಾಳೆ ಎನ್ನಲಾಗುತ್ತಿದೆ. ಹೆತ್ತವರು ಗಾಬರಿಗೊಂಡಿದ್ದು, ಮಗಳನ್ನು ಹುಡುಕಿ ಕೊಡುವಂತೆ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ನಂದಿನಿ ಲೇಔಟ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ನೀಡಿದ್ದಾರೆ. ಸೋಮವಾರ ಸಂಜೆ 4.30ಕ್ಕೆ ತೆರಳಿದ್ದ ಆಕೆ, ಮನೆಯಿಂದ 5 ಸಾವಿರ ರೂಪಾಯಿ ಇಸ್ಕೊಂಡು ಹೋಗಿದ್ದಾಳೆ ಎನ್ನುವುದು ಪೊಲೀಸರಿಗೆ ಮಾಹಿತಿ ಲಭಿಸಿದೆ.



ಮರುದಿನ ಅ.18ರಂದು ನಸುಕಿನ ಮೂರು ಗಂಟೆ ವೇಳೆಗೆ ಭಾರ್ಗವಿ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತ್ಯಕ್ಷ ಆಗಿದ್ದಳು. ಬೆಂಗಳೂರು ಬಸ್ಸಿನಲ್ಲಿ ಬಂದಿದ್ದ ಹುಡುಗಿ ಅಲ್ಲಿಂದ ಸರಿರಾತ್ರಿಯಲ್ಲೇ ಮುಕ್ಕ ಬೀಚ್ ನತ್ತ ಆಟೋದಲ್ಲಿ ತೆರಳಿದ್ದಾಳೆ. ಈಕೆ ಬಸ್ ನಿಲ್ದಾಣಕ್ಕೆ ಬಂದಿರುವುದು ಮತ್ತು ಆಟೋದಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಆನಂತರ, ಆರು ಗಂಟೆ ವೇಳೆಗೆ ಬೀಚ್ ನಿಂದ ಮರಳಿ ಅದೇ ಬಸ್ ನಿಲ್ದಾಣಕ್ಕೆ ಬಂದಿದ್ದ ಹುಡುಗಿ ಆನಂತರ ಎಲ್ಲಿ ಹೋಗಿದ್ದಾಳೆ ಅನ್ನುವುದು ಗೊತ್ತಾಗಿಲ್ಲ. ಕೆಲವರು ಆಕೆ ಮೈಸೂರು ಬಸ್ ಹತ್ತಿದ್ದಾಳೆ, ಬೆಂಗಳೂರಿಗೆ ರಿಟರ್ನ್ ಹೋಗಿದ್ದಾಳೆ ಅಂತ ಹೇಳುತ್ತಿದ್ದಾರೆ. ಈ ಬಗ್ಗೆ ಮಂಗಳೂರಿನ ಪೊಲೀಸರು ಕೂಡ ಹುಡುಕಾಟ ನಡೆಸಿದ್ದಾರೆ.



ಹುಡುಗಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಠಾಣೆಯಲ್ಲಿ ಸಂಪರ್ಕಿಸಿದಾಗ, ಇನ್ನೂ ಹುಡುಗಿ ಸಿಕ್ಕಿಲ್ಲ. ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಮಂಗಳೂರಿಗೆ ಬಂದಾಕೆ, ಬೆಂಗಳೂರಿಗೆ ಮರಳಿ ಬರ್ತಿದ್ದೀನಿ ಅಂತ ತನ್ನ ಸ್ನೇಹಿತೆಗೆ ಕರೆ ಮಾಡಿ ತಿಳಿಸಿದ್ದಾಳೆ ಎನ್ನಲಾಗುತ್ತಿದೆ. ಈ ಕರೆಯ ಜಾಡು ಹಿಡಿದು ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 14 ವರ್ಷದ ಹುಡುಗಿ ಒಬ್ಬಂಟಿಯಾಗಿಯೇ ಮಂಗಳೂರು- ಬೆಂಗಳೂರು ಸುತ್ತಾಡಿದ್ದು ಹೆತ್ತವರನ್ನು ಗಾಬರಿಪಡಿಸಿದೆ.
Missing girl from bangalore found in mangalore, gets down at KSRTC bus stand and goes to Mukka beach by Auto. Bhargavi was missing from Bangalore after her toution.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm