ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm