ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.
ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm