ಬ್ರೇಕಿಂಗ್ ನ್ಯೂಸ್
20-10-22 10:02 pm Mangalore Correspondent ಕರಾವಳಿ
ಮಂಗಳೂರು, ಅ.20 : ಸುರತ್ಕಲ್ ಟೋಲ್ಗೇಟ್ ವಿರುದ್ಧ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಹೋರಾಟ ಸಮಿತಿಯ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಟೋಲ್ಗೇಟ್ ವ್ಯವಸ್ಥಾಪಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ಪ್ರತ್ಯೇಕ ದೂರನ್ನು ಆಧರಿಸಿ, ಸುರತ್ಕಲ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ.
ಅ.18ರಂದು ಹೋರಾಟ ಸಮಿತಿಯ 25- 30ಕ್ಕು ಹೆಚ್ಚು ಸದಸ್ಯರು ಅಕ್ರಮ ಕೂಟ ಸೇರಿ ಸುರತ್ಕಲ್ ಟೋಲ್ ಪ್ಲಾಜಾ ಎದುರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತ, ವಾಹನ ಸಂಚಾರ ತಡೆದು ನಿಲ್ಲಿಸಿದ್ದಾರೆ. ಸುಗಮ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯವರು ಎಸಿಪಿ ಕಚೇರಿಯಲ್ಲಿ ಅ.14ರಂದು ನಡೆದ ಸಭೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರೂ, ಅ.18ರಂದು ನಡೆಸಿದ ಪ್ರತಿಭಟನೆಯ ವೇಳೆ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ' ಎಂದು ದೂರಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಸುರತ್ಕಲ್ ಎನ್ಐಟಿಕೆ ಟೋಲ್ನ ಶುಲ್ಕ ವಸೂಲಿ ಏಜೆನ್ಸಿ ನೂರ್ ಮೊಹಮ್ಮದ್ ಸಂಸ್ಥೆಯ ಸುರತ್ಕಲ್ ವಿಭಾಗದ ವ್ಯವಸ್ಥಾಪಕ ಶಿಶುಪಾಲ್ ಸಿಂಗ್ ಅವರು ಅ.18ರಂದೇ ದೂರು ನೀಡಿದ್ದು, ಪೊಲೀಸರು ಅದೇ ದಿನ ಎಫ್ಐಆರ್ ದಾಖಲಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 149 (ಅಕ್ರಮ ಕೂಟ ಸೇರಿ, ಸಾರ್ವಜನಿಕರ ಸುರಕ್ಷತೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿಲ್ಲ.
Mangalore Trouble of traffic moments during protest of surathkal toll, separate FIR has been registered with activists who were involved during the protest.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm