ಬ್ರೇಕಿಂಗ್ ನ್ಯೂಸ್
20-10-22 10:02 pm Mangalore Correspondent ಕರಾವಳಿ
ಮಂಗಳೂರು, ಅ.20 : ಸುರತ್ಕಲ್ ಟೋಲ್ಗೇಟ್ ವಿರುದ್ಧ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಹೋರಾಟ ಸಮಿತಿಯ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಟೋಲ್ಗೇಟ್ ವ್ಯವಸ್ಥಾಪಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ಪ್ರತ್ಯೇಕ ದೂರನ್ನು ಆಧರಿಸಿ, ಸುರತ್ಕಲ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ.
ಅ.18ರಂದು ಹೋರಾಟ ಸಮಿತಿಯ 25- 30ಕ್ಕು ಹೆಚ್ಚು ಸದಸ್ಯರು ಅಕ್ರಮ ಕೂಟ ಸೇರಿ ಸುರತ್ಕಲ್ ಟೋಲ್ ಪ್ಲಾಜಾ ಎದುರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತ, ವಾಹನ ಸಂಚಾರ ತಡೆದು ನಿಲ್ಲಿಸಿದ್ದಾರೆ. ಸುಗಮ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯವರು ಎಸಿಪಿ ಕಚೇರಿಯಲ್ಲಿ ಅ.14ರಂದು ನಡೆದ ಸಭೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರೂ, ಅ.18ರಂದು ನಡೆಸಿದ ಪ್ರತಿಭಟನೆಯ ವೇಳೆ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ' ಎಂದು ದೂರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಸುರತ್ಕಲ್ ಎನ್ಐಟಿಕೆ ಟೋಲ್ನ ಶುಲ್ಕ ವಸೂಲಿ ಏಜೆನ್ಸಿ ನೂರ್ ಮೊಹಮ್ಮದ್ ಸಂಸ್ಥೆಯ ಸುರತ್ಕಲ್ ವಿಭಾಗದ ವ್ಯವಸ್ಥಾಪಕ ಶಿಶುಪಾಲ್ ಸಿಂಗ್ ಅವರು ಅ.18ರಂದೇ ದೂರು ನೀಡಿದ್ದು, ಪೊಲೀಸರು ಅದೇ ದಿನ ಎಫ್ಐಆರ್ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 149 (ಅಕ್ರಮ ಕೂಟ ಸೇರಿ, ಸಾರ್ವಜನಿಕರ ಸುರಕ್ಷತೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿಲ್ಲ.
Mangalore Trouble of traffic moments during protest of surathkal toll, separate FIR has been registered with activists who were involved during the protest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm