ಬ್ರೇಕಿಂಗ್ ನ್ಯೂಸ್
11-10-20 01:59 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಮುಡಿಪು ಮಣ್ಣು ಮಾರಾಟ ದಂಧೆಯ ಬಗ್ಗೆ ‘ಹೆಡ್ ಲೈನ್ ಕರ್ನಾಟಕ’ ಮಾಡಿದ ವಿಸ್ತೃತ ವರದಿಯಿಂದ ಅಧಿಕಾರಿಗಳು ಎಚ್ಚತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಗಣಿಗಾರಿಕೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವುದಕ್ಕಾಗಿ ಏಳು ಮಂದಿ ಅಧಿಕಾರಿಗಳನ್ನು ನಿಯೋಜಿಸಿದ್ದಾಗಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸೂಚನೆಯಂತೆ ಮಂಗಳೂರಿನ ಸಹಾಯಕ ಕಮಿಷನರ್ ಮದನ್ ಮೋಹನ್, ಪೊಲೀಸರ ಜೊತೆಗೆ ಅಕ್ರಮ ದಂಧೆ ನಡೆಯುವ ಮುಡಿಪು ಪ್ರದೇಶಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಗಣಿಗಾರಿಕೆ ಸ್ಥಳದಲ್ಲಿದ್ದ 30ಕ್ಕೂ ಹೆಚ್ಚು ಟಿಪ್ಪರ್ ಮತ್ತು ಕಂಟೇನರ್ ಲಾರಿ, 5 ಜೆಸಿಬಿ ಹಾಗೂ ಮೂರು ಹಿಟಾಚಿ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.



ಮಣ್ಣು ಮಾರಾಟ ದಂಧೆಯ ಬಗ್ಗೆ ಗಮನಕ್ಕೆ ಬಂದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲು ಏಳು ಮಂದಿ ಅಧಿಕಾರಿಗಳನ್ನು ನಿಯೋಜಿಸಿದ್ದೇನೆ. ಪರಿಸರಕ್ಕೆ ಹಾನಿಯಾಗುವ ವಿಚಾರದಲ್ಲಿ ದೂರುಗಳು ಬಂದಿದ್ದವು. ಸ್ಥಳದಲ್ಲಿ ಗಣಿಗಾರಿಕೆ ನಡೆಸಲು ಲೈಸನ್ಸ್ ಇದೆಯೇ ಅಥವಾ ಮಣ್ಣು ಮಾರಾಟಕ್ಕೆ ಲೈಸನ್ಸ್ ಇದೆಯೇ ಅನ್ನುವ ವಿಚಾರದಲ್ಲಿ ಒಂದು ವಾರದೊಳಗೆ ರಿಪೋರ್ಟ್ ನೀಡಲು ಆದೇಶ ಮಾಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂಗಳೂರು ಹೊರವಲಯದ ಮುಡಿಪು, ಪಜೀರು, ಕೈರಂಗಳ, ಬಾಳೆಪುಣಿ, ಕೋಣಾಜೆ ಗ್ರಾಮಗಳಲ್ಲಿ ದೊಡ್ಡ ಮಟ್ಟದ ಅಕ್ರಮ ಬಾಕ್ಸೈಟ್ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿ ಮಾಡಲಾಗಿತ್ತು. ಮಣ್ಣನ್ನು ಕಂಟೇನರ್ ಲಾರಿಗಳಲ್ಲಿ ತುಂಬಿಸಿ ತಮಿಳ್ನಾಡು ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದೆ. ದಂಧೆಯಲ್ಲಿ ಪ್ರಭಾವಿ ಶಾಸಕರು ಮತ್ತು ರಾಜಕಾರಣಿಗಳು ಭಾಗಿಯಾಗಿದ್ದು, ಕಳೆದ ಐದಾರು ವರ್ಷಗಳಿಂದ ದಂಧೆ ನಡೆಯುತ್ತಿದೆ.
ಇದನ್ನೂ ಓದಿ: ಮುಡಿಪು ಗುಡ್ಡಕ್ಕೇ ಕನ್ನ ; ಮಣ್ಣಿನ ದಂಧೆ ಬಲುಜೋರು, ಪ್ರಭಾವಿಗಳ ಕಾರುಬಾರು !
Mangaluru DC Rajendra orders to draft seven member committee in probing illegal sand mining in Mudipu, Mangalore after a detailed News report by "Headline Karnataka". Concerning the scandal, one has been arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am