ಬ್ರೇಕಿಂಗ್ ನ್ಯೂಸ್
22-10-22 02:55 pm Mangalore Correspondent ಕರಾವಳಿ
ಮಂಗಳೂರು, ಅ.22 : ಧರ್ಮದ ಮೂಲವನ್ನು ಹುಡುಕಿ ಹೋದರೆ ಎಲ್ಲಿಯೂ ಸಿಗುವುದಿಲ್ಲ. ನಮ್ಮ ನಂಬಿಕೆ ಆಚರಣೆ ನಡವಳಿಕೆಗಳು ಸ್ವಾಭಾವಿಕವಾಗಿ ನಮ್ಮಲ್ಲಿ ಬೆಳೆದುಬಂದಿವೆ. ಇಲ್ಲಿ ಜೀವಿಸುವ ನಾವು ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ಅವರು ಹಿಂದೂ ಧರ್ಮದ ಯಾವ ಸೂಕ್ಷ್ಮತೆ ತಿಳಿದಿದ್ದಾರೋ ಗೊತ್ತಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನಟ ಚೇತನ್ ಕಾಂತಾರ ಸಿನಿಮಾ ವಿಚಾರದಲ್ಲಿ ಅಪಸ್ವರ ಎತ್ತಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಎರಡು ಜಿಲ್ಲೆಯಲ್ಲಿ ವ್ಯಾಪಕವಾಗಿ ಇರುವ ನಂಬಿಕೆ ದೈವಾರಾಧನೆ. ಇಂದಿಗೂ ನಾವು ದೈವಾರಾಧನೆ ಮಾಡುತ್ತೇವೆ. ದೈವದ ನುಡಿಗೆ ಗೌರವ ಕೊಡುತ್ತೇವೆ, ದೈವಗಳ ಮಾತಿಗೆ ಗೌರವ ಕೊಡುತ್ತೇವೆ. ಇದು ಧರ್ಮದ ಸೂಕ್ಷ್ಮತೆ, ವಿಮರ್ಶೆ ಮಾಡುವ ಅಗತ್ಯವಿಲ್ಲ ಎಂದು ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಮಂಗಳೂರಿನಲ್ಲಿ ಕಾಂತಾರ ಚಿತ್ರ ತಂಡದ ಜೊತೆಗೆ ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ನಟ ಚೇತನ್ ಭೂತಕೋಲ ಹಿಂದು ಧರ್ಮದ ಭಾಗ ಅಲ್ಲ ಎಂದು ಹೇಳಿದ್ದಕ್ಕೆ, ಧರ್ಮದ ಭಾಗ ಹೌದೋ, ಅಲ್ಲವೋ ಅದು ಗೊತ್ತಿಲ್ಲ. ತುಳುನಾಡಿನ ಜನರ ಮೂಲ ಸ್ವಭಾವ ಅರಿಯದೆ ಮಾತಾನಾಡಿದರೆ ಅದು ಬೇರೆಯದೇ ಆಗುತ್ತೆ. ನಮ್ಮ ಒಳಗೆ ಆಚರಣೆಗಳು ಬೆಳೆದು ಬಂದಿವೆ ಅಷ್ಟೇ ಎಂದು ಹೇಳಿದರು.

ಸಾಮಾನ್ಯವಾಗಿ ಬರುವ ಚಿತ್ರಗಳಿಗಿಂತ ವಿಭಿನ್ನವಾಗಿ ಕಾಂತಾರ ಚಿತ್ರ ಮೂಡಿಬಂದಿದೆ. ಕರಾವಳಿ ಭಾಗದ ನಂಬಿಕೆ, ನಡವಳಿಕೆಗಳು ದೈವಾರಾಧನೆಯ ಸೂಕ್ಷ್ಮತೆಗಳು ಈ ಚಿತ್ರದಲ್ಲಿವೆ. ಇಂತಹ ಚಿತ್ರದಿಂದ ಯುವಜನಾಂಗಕ್ಕೆ ಹೊಸ ಕತೆಯ ಮತ್ತು ಹಳೆಯ ಸ್ಮರಣೆ ಆಗುತ್ತೆ. ಸ್ಥಳೀಯ ಸ್ಮರಣೆಯೊಂದಿಗೆ ಹೊಸ ದೃಷ್ಟಿಕೋನ ಕೂಡ ಬೇಕು. ಜೀವನದಲ್ಲಿ ಅಸತ್ಯದ ವಿರುದ್ಧ ಹೋರಾಡುವ ಕತೆಗಳೇ ಜಾಸ್ತಿ. ಇಂದು ಕೂಡ ನಮಗೆ ಬೇಕಾಗಿರುವುದು ಸತ್ಯದ ರಕ್ಷಣೆ, ಅನ್ಯಾಯದ ವಿರುದ್ದ ಹೋರಾಟ, ನೆಮ್ಮದಿಯ ಜೀವನ. ಕಾಂತಾರ ಚಿತ್ರ ಕೂಡ ಒಬ್ಬ ನೆಮ್ಮದಿ ಇಲ್ಲದ ವ್ಯಕ್ತಿಯಿಂದಲೇ ಆರಂಭವಾಗುತ್ತೆ. ಇಂದು ನಮಗೆ ಬೇಕಾಗಿರುವುದು ನೆಮ್ಮದಿ, ಶಾಂತಿ ಮತ್ತು ಸಹಬಾಳ್ವೆ.
ಜಾತಿ ಮತ ಪಂಥಗಳ ಭೇದ ಮರೆತು ಸಹಬಾಳ್ವೆ ಬಾಳಬೇಕೆಂಬ ಸಂದೇಶ ಈ ಚಿತ್ರದಲ್ಲಿದೆ. ಚಿತ್ರ ನೋಡಿ ಸಂತೋಷ ಪಟ್ಟಿದ್ದೇನೆ, ಆ ಮೂಡಿನಿಂದ ಇನ್ನೂ ಹೊರಗೆ ಬಂದಿಲ್ಲ. ಚಿತ್ರದ ತಂಡದವರಿಗೆ ಅಭಿನಂದನೆಗಳು. ನಮ್ಮಲ್ಲಿರುವ ನಂಬಿಕೆ ಕೂಡ ಅದೇ. ಈ ನೆಲದ ದೈವಗಳು, ಭೂತಗಳು ಯಾವತ್ತೂ ಕೂಡ ಅಧರ್ಮಕ್ಕೆ ಬೆಂಬಲ ಕೊಡುವುದಿಲ್ಲ ಎಂಬುದೇ ಈ ಚಿತ್ರದಲ್ಲಿ ಇರುವ ಸಂದೇಶ. ದೈವಗಳು ಸತ್ಯ ಧರ್ಮಕ್ಕೆ ಹೊರತು ಪಡಿಸಿ ಯಾವುದಕ್ಕೂ ಬೆಂಬಲ ಕೊಡುವುದಿಲ್ಲ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದರು ಹೆಗ್ಗಡೆ.
There Is No Need To Criticize Religion Says Dr Veerendra Heggade after watching Kanatara. He made this statement reacting about Chethan Ahimsas Statement.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm