ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am