ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm