ಬ್ರೇಕಿಂಗ್ ನ್ಯೂಸ್
25-10-22 10:45 pm Mangalore Correspondent ಕರಾವಳಿ
ಮಂಗಳೂರು, ಅ.25: ಕರಾವಳಿ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಆಗಬೇಕು ಅನ್ನುವುದು ಬಹುಕಾಲದ ಕನಸು. ಕಡೆಗೂ ಕನಸು ಈಡೇರುವ ಹಂತಕ್ಕೆ ಬಂದಿದೆ. ಮಂಗಳೂರು ನಗರದಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ ಜಾಗ ಗುರುತಿಸಲಾಗಿದೆ. ಕೋಣಾಜೆ ವಿಶ್ವವಿದ್ಯಾನಿಲಯದ ಬಳಿ ಸ್ಟೇಡಿಯಂ ನಿರ್ಮಿಸಲು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯ ಸರಕಾರ ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ, ಪೊಲೀಸ್ ಫೈರಿಂಗ್ ತರಬೇತಿ ಕೇಂದ್ರ ಮತ್ತು ಹಾರ್ಸ್ ಅಕಾಡೆಮಿ ಸ್ಥಾಪನೆಗೆ ರಾಜ್ಯ ಸರಕಾರ ಸ್ಥಳ ಗುರುತಿಸಿದೆ. ಕೋಣಾಜೆ ಬಳಿ 22 ಎಕರೆ ಭೂಮಿ ಗುರುತಿಸಲಾಗಿದ್ದು ಈ ಬಗ್ಗೆ ಈ ಹಿಂದಿನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಸಮಗ್ರ ವಿವರಣೆ ಹೊಂದಿರುವ ಪ್ರಸ್ತಾಪವನ್ನು ರಾಜ್ಯ ಸರಕಾರಕ್ಕೆ ಕಳುಹಿಸಿದ್ದಾರೆ.
ರಾಜ್ಯ ಸರಕಾರ ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವುದಕ್ಕೆ ಪ್ರಾಥಮಿಕ ಒಪ್ಪಿಗೆ ನೀಡಿದೆ. ಮಂಗಳೂರಿನಲ್ಲಿಯೂ ಅದೇ ರೀತಿ ಸ್ಟೇಡಿಯಂ ನಿರ್ಮಾಣಕ್ಕೆ ಸರಕಾರ ಅನುಮತಿ ನೀಡುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳು ಮಂಗಳೂರಿನಲ್ಲಿ ಸ್ಟೇಡಿಯಂ ನಿರ್ಮಿಸುವುದಕ್ಕೆ ಒಲವು ಹೊಂದಿದ್ದಾರೆ. ರಾಜ್ಯ ಸರಕಾರ ಭೂಮಿ ಸ್ವಾಧೀನಪಡಿಸಿದ ಬಳಿಕ ಕ್ರಿಕೆಟ್ ಅಸೋಸಿಯೇಶನ್ ಪದಾಧಿಕಾರಿಗಳು ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಲಿದ್ದಾರೆ.
ಸ್ಟೇಡಿಯಂ ನಿರ್ಮಾಣಕ್ಕೆ ಸಮಗ್ರ ಡಿಪಿಆರ್ ರೆಡಿ ಮಾಡಲಾಗಿದೆ ಎನ್ನಲಾಗುತ್ತಿದ್ದು, ಒಮ್ಮೆ ಕೆಲಸ ಶುರು ಮಾಡಿದರೆ ಮೂರು ವರ್ಷಗಳಲ್ಲಿ ಮಂಗಳೂರಿನಲ್ಲಿ ಸ್ಟೇಡಿಯಂ ತಲೆಯೆತ್ತಲಿದೆ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಲ್ಲಿಸಿದ್ದ ವರದಿಯಲ್ಲಿ ಹೇಳಿದ್ದರು. ಇದೇ ವೇಳೆ ಬೋಂದೆಲ್ ನಲ್ಲಿ ಹಾರ್ಸ್ ಅಕಾಡೆಮಿ ಮತ್ತು ಪೊಲೀಸ್ ಫೈರಿಂಗ್ ಸೆಂಟರ್ ನಿರ್ಮಿಸುವುದಕ್ಕೆ ಐದು ಎಕರೆ ಭೂಮಿ ಗುರುತಿಸಲಾಗಿದೆ.
Sites for an international-level cricket stadium, a police firing training centre and a horse academy have been identified in and around the city. The long and much-awaited dream of an international cricket stadium in the coastal district is likely to fructify soon. A proposal to build a cricket stadium at Konaje has been submitted to the government.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm