ಬ್ರೇಕಿಂಗ್ ನ್ಯೂಸ್
11-10-20 07:15 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಮೂಡುಬಿದ್ರೆಯ ಶಿರ್ತಾಡಿಯಲ್ಲಿ ಇಂದು ಬೆಳಗ್ಗೆ ನಡೆದ ಗೋಕಳ್ಳರ ತಂಡದ ಮೇಲಿನ ಪೊಲೀಸ್ ಫೈರಿಂಗ್ ಅನ್ನು ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸಮರ್ಥಿಸಿಕೊಂಡಿದ್ದಾರೆ.
ಮೂಡಬಿದ್ರಿ ಪೊಲೀಸರ ಕೆಲಸ ಅಭಿನಂದನಿಸುವಂಥದ್ದು. ಗೋಕಳ್ಳರ ವಿರುದ್ಧ ನಿಜಕ್ಕೂ ಕಠಿಣ ಕ್ರಮದ ಅಗತ್ಯವಿದೆ. ಹಿಂದೆಯೂ ನಾವು ಈ ಬಗ್ಗೆ ಸರಕಾರವನ್ನ ಒತ್ತಾಯಿಸಿದ್ದೆವು. ಗೃಹ ಸಚಿವರಿಗೂ ಈ ಕುರಿತು ಮನವಿ ನೀಡಿದ್ದು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದೇನೆ ಎಂದು ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗುವ ಕೃತ್ಯ ನಡೆಯುತ್ತಿದೆ. ರಿಟ್ಸ್, ಸ್ವಿಫ್ಟ್ ಕಾರಿನಲ್ಲಿ ಆರೇಳು ದನಗಳನ್ನು ತುಂಬಿಸಿಕೊಂಡು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ. ಗೋವು ಬಡ ರೈತರ ಪಾಲಿಗೆ ಕಾಮಧೇನು ಇದ್ದಂತೆ. ನಾಲ್ಕು ದನಗಳನ್ನು ಸಾಕಿ ಅದರಿಂದ ಬರುವ ಹಣದಲ್ಲಿ ಜೀವನ ಸಾಗಿಸುವ ರೈತರಿದ್ದಾರೆ. ಇಂಥ ಸಂದರ್ಭದಲ್ಲಿ ಗೋಕಳ್ಳರು ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದು ಸಾಗಿಸುವುದನ್ನು ಸಹಿಸಲಾಗದು. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮೂಡುಬಿದ್ರೆ ಪೊಲೀಸರಿಗೆ ಸೂಚನೆ ನೀಡಿದ್ದೆ.
ಇಂದು ಬೆಳಗ್ಗೆ ಪೊಲೀಸರು ನಿಲ್ಲಿಸಲು ಸೂಚನೆ ನೀಡಿದಾಗ ಲೆಕ್ಕಿಸದೆ ಪರಾರಿಯಾದ ಗೋಕಳ್ಳರ ಕಾರಿನ ಮೇಲೆ ಗುಂಡು ಹಾರಿಸಿದ್ದು ಸೂಕ್ತ ಕ್ರಮ. ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅದರಲ್ಲಿದ್ದ ಆರೇಳು ದನಗಳು ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಎಲ್ಲೆಡೆ ಕಾರ್ಯಾಚರಣೆ ನಡೆಸಿ ಗೋಕಳ್ಳನ್ನು ಬಂಧಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಕೋಟ್ಯಾನ್ ಹೇಳಿದ್ದಾರೆ.
Moodbidri MLA Umanath Kotain applauds the work done by Moodbidre police and protecting the illegally transported cattle in the car. I have ordered the cops to take stringent action against illegal cattle traffickers he added.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm