ಬ್ರೇಕಿಂಗ್ ನ್ಯೂಸ್
28-10-22 07:50 pm Mangalore Correspondent ಕರಾವಳಿ
ಮಂಗಳೂರು, ಅ.28 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ವಿಭಿನ್ನವಾಗಿ ನಡೆಯಿತು. ನಗರದ ಬೋಳೂರಿನ ಸುಲ್ತಾನ್ ಬತ್ತೇರಿಯಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿ ಸೇರುವಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿಬಂತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಮೂಡಿಬಂತು. ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲು ವರೆಗೆ 8 ಕಿ.ಮೀ. ಸಾಗುವ ಮೂಲಕ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳು ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ನದಿ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳಲ್ಲಿ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿಬಂತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.






ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.






11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಆಸಕ್ತರು ಸೇರಿದಂತೆ 500ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ ನೆರವೇರಿತು.
Koti Kanta Gayana onboard 50 boats at Sultan Bathery in Mangalore by MLA Vedavyas Kamath.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am