ಬ್ರೇಕಿಂಗ್ ನ್ಯೂಸ್
28-10-22 07:50 pm Mangalore Correspondent ಕರಾವಳಿ
ಮಂಗಳೂರು, ಅ.28 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ವಿಭಿನ್ನವಾಗಿ ನಡೆಯಿತು. ನಗರದ ಬೋಳೂರಿನ ಸುಲ್ತಾನ್ ಬತ್ತೇರಿಯಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿ ಸೇರುವಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿಬಂತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಮೂಡಿಬಂತು. ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲು ವರೆಗೆ 8 ಕಿ.ಮೀ. ಸಾಗುವ ಮೂಲಕ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳು ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ನದಿ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳಲ್ಲಿ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿಬಂತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.






ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.






11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಆಸಕ್ತರು ಸೇರಿದಂತೆ 500ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ ನೆರವೇರಿತು.
Koti Kanta Gayana onboard 50 boats at Sultan Bathery in Mangalore by MLA Vedavyas Kamath.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm