ಬ್ರೇಕಿಂಗ್ ನ್ಯೂಸ್
28-10-22 07:50 pm Mangalore Correspondent ಕರಾವಳಿ
ಮಂಗಳೂರು, ಅ.28 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ವಿಭಿನ್ನವಾಗಿ ನಡೆಯಿತು. ನಗರದ ಬೋಳೂರಿನ ಸುಲ್ತಾನ್ ಬತ್ತೇರಿಯಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿ ಸೇರುವಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿಬಂತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಮೂಡಿಬಂತು. ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲು ವರೆಗೆ 8 ಕಿ.ಮೀ. ಸಾಗುವ ಮೂಲಕ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳು ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ನದಿ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳಲ್ಲಿ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿಬಂತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.






ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.






11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಆಸಕ್ತರು ಸೇರಿದಂತೆ 500ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ ನೆರವೇರಿತು.
Koti Kanta Gayana onboard 50 boats at Sultan Bathery in Mangalore by MLA Vedavyas Kamath.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm