ಬ್ರೇಕಿಂಗ್ ನ್ಯೂಸ್
28-10-22 08:47 pm Mangalore Correspondent ಕರಾವಳಿ
ಮಂಗಳೂರು, ಅ.28 : ಮೀನುಗಾರಿಕೆ ಧಕ್ಕೆ ಬಳಿಯ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ ಲಕ್ಷದ್ವೀಪಕ್ಕೆ ಸರಕು ಸಾಗಿಸುವ ಮಿನಿ ಹಡಗು ಮಾದರಿಯ ಮೂರು (ಮಂಜಿ) ಬೃಹತ್ ಬೋಟುಗಳು ಬೆಂಕಿಗಾಹುತಿಯಾಗಿದೆ.
ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಬೋಟ್ ಇದಾಗಿದ್ದು ಬೆಂಗ್ರೆಯಲ್ಲಿ ಮಳೆಗಾಲದಲ್ಲಿ ಮಳೆ ಬೀಳದಂತೆ ತೆಂಗಿನ ಗರಿಗಳಿಂದ ಮಾಡಿದ್ದ ಕೊಟ್ಟಿಗೆಯನ್ನು ರಚಿಸಿ, ಅದರ ಅಡಿಭಾಗದಲ್ಲಿ ಹಡಗನ್ನು ನಿಲ್ಲಿಸಲಾಗಿತ್ತು. ಶುಕ್ರವಾರ ಸಂಜೆ ಹೊತ್ತಿಗೆ ಕೊಟ್ಟಿಗೆ ಪಕ್ಕದಲ್ಲಿ ಮಕ್ಕಳು ಪಟಾಕಿ ಬಿಡುತ್ತಿದ್ದರು. ಈ ವೇಳೆ, ಮಕ್ಕಳು ಸಿಡಿಸಿದ್ದ ಪಟಾಕಿಯೊಂದು ನೇರವಾಗಿ ತೆಂಗಿನ ಗರಿಗಳಿದ್ದ ಮಾಡಿಗೆ ಹೋಗಿದ್ದು ಬೆಂಕಿ ಸಿಡಿಯುವಂತೆ ಕಾರಣವಾಗಿದೆ ಎನ್ನಲಾಗುತ್ತಿದೆ. ಕ್ಷಣಾರ್ಧದಲ್ಲಿ ಬೆಂಕಿ ಹರಡಿದ್ದು ಒಂದರಿಂದ ಇನ್ನೊಂದು ಮಿನಿ ಹಡಗುಗಳಿಗೆ ವ್ಯಾಪಿಸಿದೆ.


ಸರಕು ಸಾಗಿಸಲು ಬಳಸುತ್ತಿದ್ದ ಮೂರೂ ಹಡಗುಗಳು ಪೂರ್ತಿ ಹೊರಮೈ ಮರದಿಂದ ನಿರ್ಮಿತವಾಗಿದ್ದು ಒಳಭಾಗದ ರಚನೆಯೂ ಫೈಬರ್ ಮತ್ತು ಮರದಿಂದ ಮಾಡಲ್ಪಟ್ಟವು. ಹೀಗಾಗಿ ಬೆಂಕಿ ಬಹುಬೇಗನೆ ಇಡೀ ಹರಡಿದ್ದು ನೋಡ ನೋಡುತ್ತಲೇ ದಟ್ಟ ಹೊಗೆ ಮತ್ತು ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಏರಿತ್ತು. ಒಂದು ಹಡಗು ಮಂಗಳೂರಿನ ವೈದ್ಯರಿಗೆ ಸೇರಿದ್ದಾಗಿದ್ದು ಇನ್ನೆರಡು ಲಕ್ಷದ್ವೀಪದ ಉದ್ಯಮಿಗಳಿಗೆ ಸೇರಿದ್ದೆಂದು ಮಾಹಿತಿಯನ್ನು ಸ್ಥಳೀಯರು ತಿಳಿಸಿದ್ದಾರೆ.


ವಿಷಯ ತಿಳಿದ ಕೂಡಲೇ ವಿವಿಧ ಕಡೆಯ ಅಗ್ನಿಶಾಮಕ ದಳ ಸಿಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮೂರೂ ಹಡಗುಗಳು ಪೂರ್ತಿಯಾಗಿ ಸುಟ್ಟು ಹೋಗಿವೆ. ಈ ಮಿನಿ ಹಡಗಿನ ಒಂದರ ಬೆಲೆ ಐದು ಕೋಟಿಯಷ್ಟಿದ್ದು ಬೆಂಕಿ ದುರಂತದಲ್ಲಿ ಮೂರೂ ಭಸ್ಮ ಆಗಿವೆ. ಈ ಮಿನಿ ಹಡಗಿನಲ್ಲಿ ಅಂದಾಜು 300 ಟನ್ ನಷ್ಟು ಸರಕು ಸಾಗಾಟ ಮಾಡಲಾಗುತ್ತಿತ್ತು.
Mangalore Three boats anchored in Kasaba Bengre under Panambur Police Station limits here accidentally caught fire on Friday, October 28. It is said that initially one boat caught fire. Later the flames spread to nearby anchored boats.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm