ಬ್ರೇಕಿಂಗ್ ನ್ಯೂಸ್
28-10-22 08:47 pm Mangalore Correspondent ಕರಾವಳಿ
ಮಂಗಳೂರು, ಅ.28 : ಮೀನುಗಾರಿಕೆ ಧಕ್ಕೆ ಬಳಿಯ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ ಲಕ್ಷದ್ವೀಪಕ್ಕೆ ಸರಕು ಸಾಗಿಸುವ ಮಿನಿ ಹಡಗು ಮಾದರಿಯ ಮೂರು (ಮಂಜಿ) ಬೃಹತ್ ಬೋಟುಗಳು ಬೆಂಕಿಗಾಹುತಿಯಾಗಿದೆ.
ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಬೋಟ್ ಇದಾಗಿದ್ದು ಬೆಂಗ್ರೆಯಲ್ಲಿ ಮಳೆಗಾಲದಲ್ಲಿ ಮಳೆ ಬೀಳದಂತೆ ತೆಂಗಿನ ಗರಿಗಳಿಂದ ಮಾಡಿದ್ದ ಕೊಟ್ಟಿಗೆಯನ್ನು ರಚಿಸಿ, ಅದರ ಅಡಿಭಾಗದಲ್ಲಿ ಹಡಗನ್ನು ನಿಲ್ಲಿಸಲಾಗಿತ್ತು. ಶುಕ್ರವಾರ ಸಂಜೆ ಹೊತ್ತಿಗೆ ಕೊಟ್ಟಿಗೆ ಪಕ್ಕದಲ್ಲಿ ಮಕ್ಕಳು ಪಟಾಕಿ ಬಿಡುತ್ತಿದ್ದರು. ಈ ವೇಳೆ, ಮಕ್ಕಳು ಸಿಡಿಸಿದ್ದ ಪಟಾಕಿಯೊಂದು ನೇರವಾಗಿ ತೆಂಗಿನ ಗರಿಗಳಿದ್ದ ಮಾಡಿಗೆ ಹೋಗಿದ್ದು ಬೆಂಕಿ ಸಿಡಿಯುವಂತೆ ಕಾರಣವಾಗಿದೆ ಎನ್ನಲಾಗುತ್ತಿದೆ. ಕ್ಷಣಾರ್ಧದಲ್ಲಿ ಬೆಂಕಿ ಹರಡಿದ್ದು ಒಂದರಿಂದ ಇನ್ನೊಂದು ಮಿನಿ ಹಡಗುಗಳಿಗೆ ವ್ಯಾಪಿಸಿದೆ.


ಸರಕು ಸಾಗಿಸಲು ಬಳಸುತ್ತಿದ್ದ ಮೂರೂ ಹಡಗುಗಳು ಪೂರ್ತಿ ಹೊರಮೈ ಮರದಿಂದ ನಿರ್ಮಿತವಾಗಿದ್ದು ಒಳಭಾಗದ ರಚನೆಯೂ ಫೈಬರ್ ಮತ್ತು ಮರದಿಂದ ಮಾಡಲ್ಪಟ್ಟವು. ಹೀಗಾಗಿ ಬೆಂಕಿ ಬಹುಬೇಗನೆ ಇಡೀ ಹರಡಿದ್ದು ನೋಡ ನೋಡುತ್ತಲೇ ದಟ್ಟ ಹೊಗೆ ಮತ್ತು ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಏರಿತ್ತು. ಒಂದು ಹಡಗು ಮಂಗಳೂರಿನ ವೈದ್ಯರಿಗೆ ಸೇರಿದ್ದಾಗಿದ್ದು ಇನ್ನೆರಡು ಲಕ್ಷದ್ವೀಪದ ಉದ್ಯಮಿಗಳಿಗೆ ಸೇರಿದ್ದೆಂದು ಮಾಹಿತಿಯನ್ನು ಸ್ಥಳೀಯರು ತಿಳಿಸಿದ್ದಾರೆ.


ವಿಷಯ ತಿಳಿದ ಕೂಡಲೇ ವಿವಿಧ ಕಡೆಯ ಅಗ್ನಿಶಾಮಕ ದಳ ಸಿಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮೂರೂ ಹಡಗುಗಳು ಪೂರ್ತಿಯಾಗಿ ಸುಟ್ಟು ಹೋಗಿವೆ. ಈ ಮಿನಿ ಹಡಗಿನ ಒಂದರ ಬೆಲೆ ಐದು ಕೋಟಿಯಷ್ಟಿದ್ದು ಬೆಂಕಿ ದುರಂತದಲ್ಲಿ ಮೂರೂ ಭಸ್ಮ ಆಗಿವೆ. ಈ ಮಿನಿ ಹಡಗಿನಲ್ಲಿ ಅಂದಾಜು 300 ಟನ್ ನಷ್ಟು ಸರಕು ಸಾಗಾಟ ಮಾಡಲಾಗುತ್ತಿತ್ತು.
Mangalore Three boats anchored in Kasaba Bengre under Panambur Police Station limits here accidentally caught fire on Friday, October 28. It is said that initially one boat caught fire. Later the flames spread to nearby anchored boats.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm