ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.


ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm