ಬ್ರೇಕಿಂಗ್ ನ್ಯೂಸ್
29-10-22 10:02 pm Mangalore Correspondent ಕರಾವಳಿ
ಉಳ್ಳಾಲ, ಅ.29 : ನರಿಂಗಾನ ಗ್ರಾಮದ ಬೋಳದಪದವಿನ ವಿಶಾಲ ಪ್ರದೇಶದಲ್ಲಿ ಸರಕಾರಿ ಕಂಬಳ ಕರೆ ನಿರ್ಮಾಣವಾಗಲಿದ್ದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅವರು ನೂತನ ಕರೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಕಂಬಳ ಮತ್ತು ಯಕ್ಷಗಾನ ನಮ್ಮ ಜಿಲ್ಲೆಯ ಸಾಂಸ್ಕೃತಿಕ ರಂಗದ ಎರಡು ಕಣ್ಣುಗಳಾಗಿದ್ದು ಅದನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ವಿಧಾನಸಭೆಯಲ್ಲೂ ಧ್ವನಿ ಎತ್ತಿ ಯಶಸ್ಸು ಕಂಡಿದ್ದೇನೆ. ನರಿಂಗಾನ ಗ್ರಾಮದ ಕಂಬಳ ಪ್ರೇಮಿಗಳ ಮನವಿಯಂತೆ ಗ್ರಾಮದ ಬೋಳದಪದವಿನಲ್ಲಿ ನೂತನ ಕಂಬಳಗದ್ದೆ(ಕರೆ) ನಿರ್ಮಾಣವಾಗಲಿದ್ದು ಅದಕ್ಕೆ ಶಿಲಾನ್ಯಾಸಗೈದಿರುವುದು ಮನಸ್ಸಿಗೆ ತುಂಬ ಸಂತಸ ಕೊಟ್ಟಿದೆ. ಬೋಳದ ಪದವಿನ ಐದು ಎಕರೆ ಪ್ರದೇಶದಲ್ಲಿ ತುಳು ಗ್ರಾಮ ನಿರ್ಮಾಣವಾಗಲಿದ್ದು ಆ ನಿಟ್ಟಿನಲ್ಲಿ ಬೋಳ, ಮೋರ್ಲದ ಸರಕಾರಿ ಸ್ಥಳದ ಪ್ರತಿ ಯೋಜನೆಯನ್ನು ಒಟ್ಟು ಸೇರಿಸಿ ಎಕ್ಸಿಬಿಷನ್ ಸೆಂಟರ್ ಆಗಿ ಮಾಡಿ ತೋರಿಸಲಿದ್ದೇವೆ. ತುಳು ಗ್ರಾಮದ ಮೂಲಕ ಜಿಲ್ಲೆಯ ಎಲ್ಲ ಸಮಾಜದ ಸಂಸ್ಕೃತಿ, ಸಂಪ್ರದಾಯ, ಪರಂಪರೆಯನ್ನು ಮುಂದಿನ ಜನಾಂಗವೂ ತಿಳಿಯಲು ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಯುಟಿ ಖಾದರ್ ಹೇಳಿದರು.
ನೆತ್ತಿಲಪದವು, ಬೋಳದಪದವು ಕೇವಲ ಹೆಸರಾಗಿ ಉಳಿಯದೇ ಮುಂದಿನ ದಿನಗಳಲ್ಲಿ ಜನಾಕರ್ಷಣೆಯ ಕೇಂದ್ರವಾಗಲಿದೆ. ಭವಿಷ್ಯದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಕ್ರೀಡಾಂಗಣ ಕೂಡ ಸಕಲ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿದೆ. ಈಗಾಗಲೇ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸ್ವಿಮ್ಮಿಂಗ್ ಫೂಲ್ ಮತ್ತು ಕಮ್ಯುನಿಟಿ ಸೆಂಟರ್ ಗೆ ಸ್ಥಳ ಗುರುತಿಸಿದ್ದೇವೆ ಎಂದರು.




ಇದೇ ವೇಳೆ ಅವರು ಕಲ್ಲರಕೋಡಿ ಬಳಿ 2.5 ಕೋಟಿ ರೂ. ವೆಚ್ಚದಲ್ಲಿ ಜಲಜೀವನ್ ಅಡಿಯಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದರು.
ಕಾರ್ಯಕ್ರಮದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಜೆ. ಶೆಟ್ಟಿ, ಉಪಾಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಉಪಸ್ಥಿತರಿದ್ದರು.
Mangalore UT Khader lays foundation stone to Government Lake for Kambala in Ullal.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm