ಬ್ರೇಕಿಂಗ್ ನ್ಯೂಸ್
29-10-22 10:02 pm Mangalore Correspondent ಕರಾವಳಿ
ಉಳ್ಳಾಲ, ಅ.29 : ನರಿಂಗಾನ ಗ್ರಾಮದ ಬೋಳದಪದವಿನ ವಿಶಾಲ ಪ್ರದೇಶದಲ್ಲಿ ಸರಕಾರಿ ಕಂಬಳ ಕರೆ ನಿರ್ಮಾಣವಾಗಲಿದ್ದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅವರು ನೂತನ ಕರೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಕಂಬಳ ಮತ್ತು ಯಕ್ಷಗಾನ ನಮ್ಮ ಜಿಲ್ಲೆಯ ಸಾಂಸ್ಕೃತಿಕ ರಂಗದ ಎರಡು ಕಣ್ಣುಗಳಾಗಿದ್ದು ಅದನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ವಿಧಾನಸಭೆಯಲ್ಲೂ ಧ್ವನಿ ಎತ್ತಿ ಯಶಸ್ಸು ಕಂಡಿದ್ದೇನೆ. ನರಿಂಗಾನ ಗ್ರಾಮದ ಕಂಬಳ ಪ್ರೇಮಿಗಳ ಮನವಿಯಂತೆ ಗ್ರಾಮದ ಬೋಳದಪದವಿನಲ್ಲಿ ನೂತನ ಕಂಬಳಗದ್ದೆ(ಕರೆ) ನಿರ್ಮಾಣವಾಗಲಿದ್ದು ಅದಕ್ಕೆ ಶಿಲಾನ್ಯಾಸಗೈದಿರುವುದು ಮನಸ್ಸಿಗೆ ತುಂಬ ಸಂತಸ ಕೊಟ್ಟಿದೆ. ಬೋಳದ ಪದವಿನ ಐದು ಎಕರೆ ಪ್ರದೇಶದಲ್ಲಿ ತುಳು ಗ್ರಾಮ ನಿರ್ಮಾಣವಾಗಲಿದ್ದು ಆ ನಿಟ್ಟಿನಲ್ಲಿ ಬೋಳ, ಮೋರ್ಲದ ಸರಕಾರಿ ಸ್ಥಳದ ಪ್ರತಿ ಯೋಜನೆಯನ್ನು ಒಟ್ಟು ಸೇರಿಸಿ ಎಕ್ಸಿಬಿಷನ್ ಸೆಂಟರ್ ಆಗಿ ಮಾಡಿ ತೋರಿಸಲಿದ್ದೇವೆ. ತುಳು ಗ್ರಾಮದ ಮೂಲಕ ಜಿಲ್ಲೆಯ ಎಲ್ಲ ಸಮಾಜದ ಸಂಸ್ಕೃತಿ, ಸಂಪ್ರದಾಯ, ಪರಂಪರೆಯನ್ನು ಮುಂದಿನ ಜನಾಂಗವೂ ತಿಳಿಯಲು ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಯುಟಿ ಖಾದರ್ ಹೇಳಿದರು.
ನೆತ್ತಿಲಪದವು, ಬೋಳದಪದವು ಕೇವಲ ಹೆಸರಾಗಿ ಉಳಿಯದೇ ಮುಂದಿನ ದಿನಗಳಲ್ಲಿ ಜನಾಕರ್ಷಣೆಯ ಕೇಂದ್ರವಾಗಲಿದೆ. ಭವಿಷ್ಯದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಕ್ರೀಡಾಂಗಣ ಕೂಡ ಸಕಲ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿದೆ. ಈಗಾಗಲೇ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸ್ವಿಮ್ಮಿಂಗ್ ಫೂಲ್ ಮತ್ತು ಕಮ್ಯುನಿಟಿ ಸೆಂಟರ್ ಗೆ ಸ್ಥಳ ಗುರುತಿಸಿದ್ದೇವೆ ಎಂದರು.




ಇದೇ ವೇಳೆ ಅವರು ಕಲ್ಲರಕೋಡಿ ಬಳಿ 2.5 ಕೋಟಿ ರೂ. ವೆಚ್ಚದಲ್ಲಿ ಜಲಜೀವನ್ ಅಡಿಯಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದರು.
ಕಾರ್ಯಕ್ರಮದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಜೆ. ಶೆಟ್ಟಿ, ಉಪಾಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಉಪಸ್ಥಿತರಿದ್ದರು.
Mangalore UT Khader lays foundation stone to Government Lake for Kambala in Ullal.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm