ಬ್ರೇಕಿಂಗ್ ನ್ಯೂಸ್
01-11-22 07:20 pm Mangalore Correspondent ಕರಾವಳಿ
ಮಂಗಳೂರು, ನ.1 : ಎನ್ ಐಟಿಕೆ ಬಳಿಯ ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆ ಮಂಗಳವಾರ 5ನೇ ದಿನ ಪೂರೈಸಿದ್ದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷವಾಗಿ ಧರಣಿ ನಡೆಸಲಾಗಿದೆ.
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಹಲವಾರು ಸಾಮಾಜಿಕ ಸಂಘಟನೆಗಳ ಬೆಂಬಲದೊಂದಿಗೆ ಪ್ರತಿಭಟನೆ ನಡೆಯುತ್ತಿದೆ. ಡಿವೈ ಎಫ್ ಐ, ಕಾಂಗ್ರೆಸ್, ಜೆಡಿಎಸ್, ದಸಂಸ, ಟ್ಯಾಕ್ಸಿ, ಕ್ಯಾಬ್ ಅಶೋಸಿಯೇಷನ್, ಬಸ್ ಮಾಲಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ನ.1ರ ಹಿನ್ನೆಲೆಯಲ್ಲಿ ಧರಣಿ ಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. ಬೆಳಗ್ಗೆ ಧರಣಿ ಸ್ಥಳದಲ್ಲಿ ಕನ್ನಡ ಧ್ವಜಾರೋಹಣ ನಡೆಸಲಾಯಿ.


ಇದರ ನಿಮಿತ್ತ ಕವಿಗೋಷ್ಠಿ, ಮೇಘನಾ ಕುಂದಾಪುರ ಇವರಿಂದ ಗಾಯನ ಕಾರ್ಯಕ್ರಮ, ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಜೆ ಸೂರ್ಯಾಸ್ತವಾಗುತ್ತಿದ್ದಂತೆ ಧ್ವಜ ಅವರೋಹಣ ನಡೆಯಿತು. ಇದರ ನಡುವೆ, ಸಮಾನ ಮನಸ್ಕ ವಕೀಲರು ಕೂಡ ಧರಣಿ ಸ್ಥಳಕ್ಕೆ ಬಂದು ಪ್ರತಿಭಟನೆಗೆ ಕೈಜೋಡಿಸಿದರು. ಮಂಗಳೂರು ಜನಪರ ವಕೀಲರ ತಂಡದ ಬಿ. ಇಬ್ರಾಹಿಂ, ಯಶವಂತ ಮರೋಳಿ, ಎಸ್.ಪಿ ಚೆಂಗಪ್ಪ, ಟಿ. ನಾರಾಯಣ ಪೂಜಾರಿ, ಶಾಲಿನಿ, ವಸಂತ ಕಾರಂದೂರು, ರಾಮಚಂದ್ರ ಬಬ್ಬುಕಟ್ಟೆ, ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ದಿನೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.


ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಮಾಜಿ ಶಾಸಕ ಕೆ ಅಭಯಚಂದ್ರ ಜೈನ್, ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಐದನೇ ದಿನವೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಡಿವೈಎಫ್ಐನ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸಾಮಾಜಿಕ ಹೋರಾಟಗಾರ ಎಂ. ಜಿ. ಹೆಗಡೆ, ಹಮ್ಮಬ್ಬ ಕಾಟಿಪಳ್ಳ, ಹಸನಬ್ಬ ಮಂಗಲಪೇಟೆ, ಧರ್ಮಾನಂದ ಶೆಟ್ಟಿಗಾರ್, ಬಜ್ಪೆ ಪಂಚಾಯತ್ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್, ಸಾಲೆ ಮುಹಮ್ಮದ್, ದಯಾನಂದ ಶೆಟ್ಟಿ, ರಾಘವೇಂದ್ರ ರಾವ್ ಮತ್ತಿತರರು ಧರಣಿಯಲ್ಲಿ ನಿರತರಾಗಿದ್ದಾರೆ.
Mangalore The indefinite protest, led by Toll Gate Virodhi Horata Samithi against the Surathkal toll plaza, entered the fifth day.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm