ಬ್ರೇಕಿಂಗ್ ನ್ಯೂಸ್
02-11-22 11:13 am Mangalore Correspondent ಕರಾವಳಿ
ಮಂಗಳೂರು, ನ.2: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳಾದ ನಾಲ್ವರು ಪಿಎಫ್ಐ ಕಾರ್ಯಕರ್ತರ ಪತ್ತೆಗೆ ಎನ್ಐಎ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದು ಸುಳಿವು ಕೊಟ್ಟವರಿಗೆ ಒಟ್ಟು 14 ಲಕ್ಷ ನಗದು ಬಹುಮಾನದ ಘೋಷಣೆ ಮಾಡಿದೆ.
ಮಹಮ್ಮದ್ ಮುಸ್ತಾಫ, ತುಫೈಲ್, ಉಮ್ಮರ್ ಫಾರೂಕ್, ಅಬುಬುಕ್ಕರ್ ಸಿದ್ಧೀಕ್ ತಲೆಮರೆಸಿಕೊಂಡ ಆರೋಪಿಗಳಾಗಿದ್ದು ಇವರ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಬೆಳ್ಳಾರೆ ನಿವಾಸಿ ಮೂಡುಮನೆ ಮಹಮ್ಮದ್ ಮುಸ್ತಫಾ ಬಗ್ಗೆ ಸುಳಿವು ನೀಡಿದರೆ ಐದು ಲಕ್ಷ ರೂ., ಮಡಿಕೇರಿ ಗದ್ದಿಗೆ ಮಸೀದಿ ಪಕ್ಕದ ನಿವಾಸಿ ತುಫೈಲ್ ಎಚ್.ಎಂ ಬಗ್ಗೆ ಸುಳಿವು ನೀಡಿದರೆ ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ.


ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆ ನಿವಾಸಿ ಅಬುಬಕ್ಕರ್ ಸಿದ್ಧಿಕ್ ಬಗ್ಗೆ ಸುಳಿವು ನೀಡಿದರೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಆರೋಪಿಗಳು ನಿಷೇಧಿತ ಪಿಎಫ್ಐ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದು ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದಾರೆ. ಜುಲೈ 27 ರಂದು ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಪ್ರಕರಣದಲ್ಲಿ ಒಟ್ಟು ಹತ್ತು ಮಂದಿ ಆರೋಪಿಗಳನ್ನು ರಾಜ್ಯ ಪೊಲೀಸರು ಮತ್ತು ಎನ್ ಐ ಎ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿತ್ತು. ಈ ನಡುವೆ, ಸೆ.28ರಂದು ಪಿಎಫ್ಐ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಲಾಗಿತ್ತು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಆ ಸಂಘಟನೆಯಲ್ಲಿ ಗುರುತಿಸಿದ್ದ ರಾಜ್ಯ ನಾಯಕರು, ಜಿಲ್ಲಾ ನಾಯಕರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿದ್ದ ನಾಲ್ವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಪತ್ತೆ ಸಾಧ್ಯವಾಗದೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದ್ದು ದೇಶದ ಯಾವ ಮೂಲೆಯಲ್ಲಿ ಅವಿತಿದ್ದರೂ ಸುಳಿವು ಕೊಡಿ. ನಿಮ್ಮ ಮಾಹಿತಿ ಗೌಪ್ಯ ಇಡಲಾಗುವುದು ಎಂದು ಎನ್ಐಎ ಬೆಂಗಳೂರು ಕಚೇರಿಯಿಂದ ಹೊರಡಿಸಿದ ನೋಟೀಸಿನಲ್ಲಿ ತಿಳಿಸಲಾಗಿದೆ.
The National Investigating Agency (NIA), which is investigating the murder case of Hindu activist Praveen Nettaru that took place at Sullia of Dakshina Kannada has announced a reward for those who will provide information on four members of the now banned Popular Front of India (PFI), who are absconding.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm