ಬ್ರೇಕಿಂಗ್ ನ್ಯೂಸ್
05-11-22 11:55 am HK News Desk ಕರಾವಳಿ
ಮಂಗಳೂರು, ನ.4:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಪುತ್ತೂರು, ಸುಳ್ಯ, ಮೈಸೂರು, ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಆತನ ಸಹೋದರ ಎಸ್ಡಿಪಿಐ ಜಿಲ್ಲಾ ಸಮಿತಿ ಮುಖಂಡ ಇಕ್ಬಾಲ್ ಬೆಳ್ಳಾರೆಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ರಾಹಿಂ ಷಾ ಎಂಬ ಇನ್ನೊಬ್ಬನನ್ನು ಕೂಡ ಸುಳ್ಯದಲ್ಲಿ ಬಂಧಿಸಲಾಗಿದೆ. ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯಾಗಿದ್ದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಮನೆಯಿಂದ ಸುಲೇಮಾನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಶಾಫಿ ಬೆಳ್ಳಾರೆ ಅವರನ್ನು ಪೊಲೀಸರು ವಿಚಾರಣೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆನಂತರ, ಪಿಎಫ್ಐ ಸಂಘಟನೆ ನಿಷೇಧ ಮಾಡಲಾಗಿತ್ತು. ಶಾಫಿ ಮತ್ತು ಇಕ್ಬಾಲ್ ಇಬ್ಬರು ಕೂಡ ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಳ್ಳಾರೆ ಸೋದರರ ಪಾತ್ರದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಈ ಪೈಕಿ ಶಾಫಿ ಬೆಳ್ಳಾರೆ ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಲ್ಲಿ ಎನ್ಐಎ ಕೈಗೆ ಸಿಕ್ಕಿಬಿದ್ದಿದ್ದ ಎನ್ನಲಾಗುತ್ತಿದ್ದು ಇದೀಗ ಆತನ ಸೋದರ ಇಕ್ಬಾಲ್ ಮತ್ತು ಇಬ್ರಾಹಿಂ ಷಾ ಎಂಬವರನ್ನು ಬಂಧಿಸಲಾಗಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯನೂ ಆಗಿದ್ದ. ಈ ಮೂವರನ್ನು ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆಯೇ, ಪಿಎಫ್ಐ ನಂಟಿನ ಆರೋಪದಲ್ಲಿ ಬಂಧನ ಮಾಡಲಾಗಿದೆಯೇ ಎನ್ನುವುದು ದೃಢಪಟ್ಟಿಲ್ಲ.\
In connection to the BJP party worker Praveen Nettaru murder case, National Investigation Agency (NIA) officials raided the residences of the now banned Popular Front of India (PFI) and SDPI leaders across the state. It is learnt that NIA officials have detained three persons.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm