ಬ್ರೇಕಿಂಗ್ ನ್ಯೂಸ್
05-11-22 11:55 am HK News Desk ಕರಾವಳಿ
ಮಂಗಳೂರು, ನ.4:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಪುತ್ತೂರು, ಸುಳ್ಯ, ಮೈಸೂರು, ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಆತನ ಸಹೋದರ ಎಸ್ಡಿಪಿಐ ಜಿಲ್ಲಾ ಸಮಿತಿ ಮುಖಂಡ ಇಕ್ಬಾಲ್ ಬೆಳ್ಳಾರೆಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ರಾಹಿಂ ಷಾ ಎಂಬ ಇನ್ನೊಬ್ಬನನ್ನು ಕೂಡ ಸುಳ್ಯದಲ್ಲಿ ಬಂಧಿಸಲಾಗಿದೆ. ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯಾಗಿದ್ದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಮನೆಯಿಂದ ಸುಲೇಮಾನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಶಾಫಿ ಬೆಳ್ಳಾರೆ ಅವರನ್ನು ಪೊಲೀಸರು ವಿಚಾರಣೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆನಂತರ, ಪಿಎಫ್ಐ ಸಂಘಟನೆ ನಿಷೇಧ ಮಾಡಲಾಗಿತ್ತು. ಶಾಫಿ ಮತ್ತು ಇಕ್ಬಾಲ್ ಇಬ್ಬರು ಕೂಡ ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಳ್ಳಾರೆ ಸೋದರರ ಪಾತ್ರದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಈ ಪೈಕಿ ಶಾಫಿ ಬೆಳ್ಳಾರೆ ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಲ್ಲಿ ಎನ್ಐಎ ಕೈಗೆ ಸಿಕ್ಕಿಬಿದ್ದಿದ್ದ ಎನ್ನಲಾಗುತ್ತಿದ್ದು ಇದೀಗ ಆತನ ಸೋದರ ಇಕ್ಬಾಲ್ ಮತ್ತು ಇಬ್ರಾಹಿಂ ಷಾ ಎಂಬವರನ್ನು ಬಂಧಿಸಲಾಗಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯನೂ ಆಗಿದ್ದ. ಈ ಮೂವರನ್ನು ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆಯೇ, ಪಿಎಫ್ಐ ನಂಟಿನ ಆರೋಪದಲ್ಲಿ ಬಂಧನ ಮಾಡಲಾಗಿದೆಯೇ ಎನ್ನುವುದು ದೃಢಪಟ್ಟಿಲ್ಲ.\
In connection to the BJP party worker Praveen Nettaru murder case, National Investigation Agency (NIA) officials raided the residences of the now banned Popular Front of India (PFI) and SDPI leaders across the state. It is learnt that NIA officials have detained three persons.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm