ಬ್ರೇಕಿಂಗ್ ನ್ಯೂಸ್
05-11-22 12:37 pm HK News Desk ಕರಾವಳಿ
ಅಮೃತಸರ, ನ.5:ಹಿಂದು ಸಂಘಟನೆ ಮುಖಂಡ ಹಾಗೂ ಶಿವಸೇನೆ ನಾಯಕನಾಗಿದ್ದ ಸುಧೀರ್ ಸೂರಿ ಅವರನ್ನು ಪೊಲೀಸರ ಎದುರಲ್ಲೇ ಗುಂಡಿಟ್ಟು ಕೊಂದ ಘಟನೆ ಪಂಜಾಬಿನ ಅಮೃತ್ಸರನಲ್ಲಿ ನಡೆದಿದೆ. ದೇವಾಲಯದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸುಧೀರ್ ಸೂರಿ ಮೇಲೆ ವ್ಯಕ್ತಿಯೊಬ್ಬ ಐದು ಸುತ್ತು ಗುಂಡು ಹಾರಿಸಿ ಕೊಲೆಗೈದಿದ್ದಾನೆ.
ದೇವರ ಭಗ್ನಗೊಂಡ ಮೂರ್ತಿಗಳು ರಸ್ತೆ ಬದಿ ಪತ್ತೆಯಾದ ಹಿನ್ನೆಲೆಯಲ್ಲಿ ಗೋಪಾಲ್ ಮಂದಿರದ ಆಡಳಿತ ಮಂಡಳಿ ವಿರುದ್ಧ ಸುಧೀರ್ ಸೂರಿ ನೇತೃತ್ವದಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆಯಲ್ಲಿ ಧರಣಿ ಕುಳಿತಿದ್ದ ಸುಧೀರ್ ಸೂರಿ ಹಾಗೂ ಅವರ ಬೆಂಬಲಿಗರು, ಹಿಂದೂ ದೇವರನ್ನು ಅವಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದರು. ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ನುಗ್ಗಿದ್ದ ಸಂದೀಪ್ ಸಿಂಗ್ ಎಂಬಾತ, ಏಕಾಏಕಿ ಸುಧಿರ್ ಸೂರಿ ಅವರತ್ತ ಐದು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಪೊಲೀಸರು ಸ್ಥಳದಲ್ಲಿ ಹಾಜರಿದ್ದರೂ, ದಾಳಿಯನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಗುಂಡೇಟಿನಿಂದ ಕುಸಿದು ಬಿದ್ದ ಸುಧೀರ್ ಸೂರಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಅವರು ಕೊನೆಯಿಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.



ಆರೋಪಿ ಸಂದೀಪ್ ಸಿಂಗ್ನನ್ನು ಬಂಧಿಸಲಾಗಿದ್ದು, ದಾಳಿಗೆ ಬಳಸಿದ ಪರವಾನಗಿ ಹೊಂದಿದ್ದ ಪಿಸ್ತೂಲ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂದೀಪ್ ಸಿಂಗ್ ಬಟ್ಟೆ ಅಂಗಡಿ ಮಾಲೀಕನಾಗಿದ್ದು, ಸುಧೀರ್ ಸೂರಿ ಅವರ ಹಿಂದೂ ಪರ ನಿಲುವನ್ನು ವಿರೋಧಿಸುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಗುಂಡು ಹಾರಿಸಿದ್ದಾನೆಯೇ ಗೊತ್ತಾಗಿಲ್ಲ. ಶಿವಸೇನಾ ಮುಖಂಡ ಸುಧಿರ್ ಸೂರಿ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದರು. ಆದರೆ ಸಿಖ್ ಮೂಲಭೂತವಾದವನ್ನು ವಿರೋಧಿಸುತ್ತಿದ್ದರು. ಇದರಿಂದ ಖಲಿಸ್ತಾನ್ ಪರ ಹೋರಾಟಗಾರರ ವಿರೋಧವನ್ನೂ ಕಟ್ಟಿಕೊಂಡಿದ್ದರು. ಸೂರಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೂಡ ಒದಗಿಸಿತ್ತು.
Tension gripped Amritsar on Friday after Shiv Sena leader Sudhir Suri was shot dead in a broad daylight here. This is the second shootout in Punjab after singer Sidhu Moosewala was shot dead in Mansa district on May 29. Speaking to reporters about the incident, Arun Pal Singh, Commissioner of Police Amritsar said, multiple shots were fired at Suri.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm