ಬ್ರೇಕಿಂಗ್ ನ್ಯೂಸ್
05-11-22 04:39 pm HK News Desk ಕರಾವಳಿ
ಮಂಗಳೂರು, ನ.5:ಎನ್ಐಎ ಅಧಿಕಾರಿಗಳು ಮೈಸೂರು, ದಕ್ಷಿಣ ಕನ್ನಡ ಮತ್ತು ಹುಬ್ಬಳ್ಳಿ ಜಿಲ್ಲೆಯ ಐದು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ಬಗ್ಗೆ ಅಧಿಕೃತ ಪತ್ರಿಕಾ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ದೆಹಲಿ ಎನ್ಐಎ ಕಚೇರಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್, ಇಸ್ಮಾಯಿಲ್ ಶಾಫಿ, ಸುಳ್ಯ ಬಳಿಯ ನಾವೂರು ನಿವಾಸಿ ಇಬ್ರಾಹಿಂ ಪಾಷಾ ಬಂಧಿತರು. ಪ್ರವೀಣ್ ನೆಟ್ಟಾರು ಕೊಲೆಗೆ ಮೂವರು ಆರೋಪಿಗಳು ಸಂಚು ನಡೆಸಿರುವುದರಲ್ಲಿ ಭಾಗಿಯಾಗಿದ್ದಾರೆ. ದಾಳಿ ಕಾರ್ಯಾಚರಣೆ ಸಂದರ್ಭದಲ್ಲಿ ಡಿಜಿಟಲ್ ಸಾಕ್ಷ್ಯಗಳು, ದಾಖಲೆ ಪತ್ರಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.

ಈಗಾಗಲೇ ಪ್ರಕರಣದಲ್ಲಿ ಹತ್ತು ಮಂದಿಯನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ನಾಲ್ವರ ಬಂಧನಕ್ಕಾಗಿ ಸುಳಿವು ಕೊಟ್ಟವರಿಗೆ ಎನ್ಐಎ 14 ಲಕ್ಷ ರೂಪಾಯಿ ಬಹುಮಾನವನ್ನೂ ಪ್ರಕಟಿಸಿದ್ದಾರೆ. ಪಿಎಫ್ಐ ಸಂಘಟನೆಯ ಸದಸ್ಯರು ಸಮಾಜದಲ್ಲಿ ಭಯ ಮೂಡಿಸುವ ದೃಷ್ಟಿಯಿಂದ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ್ದರು ಎನ್ನುವುದು ಎನ್ಐಎ ತನಿಖೆಯಲ್ಲಿ ಪತ್ತೆಯಾಗಿತ್ತು. ಇಸ್ಮಾಯಿಲ್ ಶಾಫಿ ಮತ್ತು ಮಹಮ್ಮದ್ ಇಕ್ಬಾಲ್ ಸೋದರರಾಗಿದ್ದು, ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಆನಂತರ, ಎಸ್ಡಿಪಿಐ ಪಕ್ಷದಲ್ಲಿ ಗುರುತಿಸ್ಕೊಂಡು ಶಾಫಿ ಬೆಳ್ಳಾರೆ ರಾಜ್ಯ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದ. ಮಹಮ್ಮದ್ ಇಕ್ಬಾಲ್ ಬೆಳ್ಳಾರೆ ಗ್ರಾಪಂನಲ್ಲಿ ಸದಸ್ಯನಾಗಿದ್ದು, ಎಸ್ಡಿಪಿಐ ಪಕ್ಷದಲ್ಲಿ ಜಿಲ್ಲಾ ಮುಖಂಡನಾಗಿ ಗುರುತಿಸಲ್ಪಟ್ಟಿದ್ದ. ಇದೀಗ ಇಬ್ಬರನ್ನೂ ಎನ್ಐಎ ಅಧಿಕಾರಿಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Mangalore NIA releases statement on arrest of PFI leaders Shafi Bellare, Iqbal Bellare and Ibrahim Shah. Iqbal Bellare is the gram panchayat member of Bellare village, while Shafi Bellare is the State Secretary for the Socialist Democratic Party of India (SDPI). The NIA officials said raids are being carried out in Sullia, Uppinangady, Mysuru and Hubballi.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am