ಬ್ರೇಕಿಂಗ್ ನ್ಯೂಸ್
05-11-22 04:39 pm HK News Desk ಕರಾವಳಿ
ಮಂಗಳೂರು, ನ.5:ಎನ್ಐಎ ಅಧಿಕಾರಿಗಳು ಮೈಸೂರು, ದಕ್ಷಿಣ ಕನ್ನಡ ಮತ್ತು ಹುಬ್ಬಳ್ಳಿ ಜಿಲ್ಲೆಯ ಐದು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ಬಗ್ಗೆ ಅಧಿಕೃತ ಪತ್ರಿಕಾ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ದೆಹಲಿ ಎನ್ಐಎ ಕಚೇರಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್, ಇಸ್ಮಾಯಿಲ್ ಶಾಫಿ, ಸುಳ್ಯ ಬಳಿಯ ನಾವೂರು ನಿವಾಸಿ ಇಬ್ರಾಹಿಂ ಪಾಷಾ ಬಂಧಿತರು. ಪ್ರವೀಣ್ ನೆಟ್ಟಾರು ಕೊಲೆಗೆ ಮೂವರು ಆರೋಪಿಗಳು ಸಂಚು ನಡೆಸಿರುವುದರಲ್ಲಿ ಭಾಗಿಯಾಗಿದ್ದಾರೆ. ದಾಳಿ ಕಾರ್ಯಾಚರಣೆ ಸಂದರ್ಭದಲ್ಲಿ ಡಿಜಿಟಲ್ ಸಾಕ್ಷ್ಯಗಳು, ದಾಖಲೆ ಪತ್ರಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.
ಈಗಾಗಲೇ ಪ್ರಕರಣದಲ್ಲಿ ಹತ್ತು ಮಂದಿಯನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ನಾಲ್ವರ ಬಂಧನಕ್ಕಾಗಿ ಸುಳಿವು ಕೊಟ್ಟವರಿಗೆ ಎನ್ಐಎ 14 ಲಕ್ಷ ರೂಪಾಯಿ ಬಹುಮಾನವನ್ನೂ ಪ್ರಕಟಿಸಿದ್ದಾರೆ. ಪಿಎಫ್ಐ ಸಂಘಟನೆಯ ಸದಸ್ಯರು ಸಮಾಜದಲ್ಲಿ ಭಯ ಮೂಡಿಸುವ ದೃಷ್ಟಿಯಿಂದ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ್ದರು ಎನ್ನುವುದು ಎನ್ಐಎ ತನಿಖೆಯಲ್ಲಿ ಪತ್ತೆಯಾಗಿತ್ತು. ಇಸ್ಮಾಯಿಲ್ ಶಾಫಿ ಮತ್ತು ಮಹಮ್ಮದ್ ಇಕ್ಬಾಲ್ ಸೋದರರಾಗಿದ್ದು, ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಆನಂತರ, ಎಸ್ಡಿಪಿಐ ಪಕ್ಷದಲ್ಲಿ ಗುರುತಿಸ್ಕೊಂಡು ಶಾಫಿ ಬೆಳ್ಳಾರೆ ರಾಜ್ಯ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದ. ಮಹಮ್ಮದ್ ಇಕ್ಬಾಲ್ ಬೆಳ್ಳಾರೆ ಗ್ರಾಪಂನಲ್ಲಿ ಸದಸ್ಯನಾಗಿದ್ದು, ಎಸ್ಡಿಪಿಐ ಪಕ್ಷದಲ್ಲಿ ಜಿಲ್ಲಾ ಮುಖಂಡನಾಗಿ ಗುರುತಿಸಲ್ಪಟ್ಟಿದ್ದ. ಇದೀಗ ಇಬ್ಬರನ್ನೂ ಎನ್ಐಎ ಅಧಿಕಾರಿಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Mangalore NIA releases statement on arrest of PFI leaders Shafi Bellare, Iqbal Bellare and Ibrahim Shah. Iqbal Bellare is the gram panchayat member of Bellare village, while Shafi Bellare is the State Secretary for the Socialist Democratic Party of India (SDPI). The NIA officials said raids are being carried out in Sullia, Uppinangady, Mysuru and Hubballi.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm