ಬ್ರೇಕಿಂಗ್ ನ್ಯೂಸ್
05-11-22 04:39 pm HK News Desk ಕರಾವಳಿ
ಮಂಗಳೂರು, ನ.5:ಎನ್ಐಎ ಅಧಿಕಾರಿಗಳು ಮೈಸೂರು, ದಕ್ಷಿಣ ಕನ್ನಡ ಮತ್ತು ಹುಬ್ಬಳ್ಳಿ ಜಿಲ್ಲೆಯ ಐದು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ಬಗ್ಗೆ ಅಧಿಕೃತ ಪತ್ರಿಕಾ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ದೆಹಲಿ ಎನ್ಐಎ ಕಚೇರಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್, ಇಸ್ಮಾಯಿಲ್ ಶಾಫಿ, ಸುಳ್ಯ ಬಳಿಯ ನಾವೂರು ನಿವಾಸಿ ಇಬ್ರಾಹಿಂ ಪಾಷಾ ಬಂಧಿತರು. ಪ್ರವೀಣ್ ನೆಟ್ಟಾರು ಕೊಲೆಗೆ ಮೂವರು ಆರೋಪಿಗಳು ಸಂಚು ನಡೆಸಿರುವುದರಲ್ಲಿ ಭಾಗಿಯಾಗಿದ್ದಾರೆ. ದಾಳಿ ಕಾರ್ಯಾಚರಣೆ ಸಂದರ್ಭದಲ್ಲಿ ಡಿಜಿಟಲ್ ಸಾಕ್ಷ್ಯಗಳು, ದಾಖಲೆ ಪತ್ರಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.

ಈಗಾಗಲೇ ಪ್ರಕರಣದಲ್ಲಿ ಹತ್ತು ಮಂದಿಯನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ನಾಲ್ವರ ಬಂಧನಕ್ಕಾಗಿ ಸುಳಿವು ಕೊಟ್ಟವರಿಗೆ ಎನ್ಐಎ 14 ಲಕ್ಷ ರೂಪಾಯಿ ಬಹುಮಾನವನ್ನೂ ಪ್ರಕಟಿಸಿದ್ದಾರೆ. ಪಿಎಫ್ಐ ಸಂಘಟನೆಯ ಸದಸ್ಯರು ಸಮಾಜದಲ್ಲಿ ಭಯ ಮೂಡಿಸುವ ದೃಷ್ಟಿಯಿಂದ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ್ದರು ಎನ್ನುವುದು ಎನ್ಐಎ ತನಿಖೆಯಲ್ಲಿ ಪತ್ತೆಯಾಗಿತ್ತು. ಇಸ್ಮಾಯಿಲ್ ಶಾಫಿ ಮತ್ತು ಮಹಮ್ಮದ್ ಇಕ್ಬಾಲ್ ಸೋದರರಾಗಿದ್ದು, ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಆನಂತರ, ಎಸ್ಡಿಪಿಐ ಪಕ್ಷದಲ್ಲಿ ಗುರುತಿಸ್ಕೊಂಡು ಶಾಫಿ ಬೆಳ್ಳಾರೆ ರಾಜ್ಯ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದ. ಮಹಮ್ಮದ್ ಇಕ್ಬಾಲ್ ಬೆಳ್ಳಾರೆ ಗ್ರಾಪಂನಲ್ಲಿ ಸದಸ್ಯನಾಗಿದ್ದು, ಎಸ್ಡಿಪಿಐ ಪಕ್ಷದಲ್ಲಿ ಜಿಲ್ಲಾ ಮುಖಂಡನಾಗಿ ಗುರುತಿಸಲ್ಪಟ್ಟಿದ್ದ. ಇದೀಗ ಇಬ್ಬರನ್ನೂ ಎನ್ಐಎ ಅಧಿಕಾರಿಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Mangalore NIA releases statement on arrest of PFI leaders Shafi Bellare, Iqbal Bellare and Ibrahim Shah. Iqbal Bellare is the gram panchayat member of Bellare village, while Shafi Bellare is the State Secretary for the Socialist Democratic Party of India (SDPI). The NIA officials said raids are being carried out in Sullia, Uppinangady, Mysuru and Hubballi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm