ಬ್ರೇಕಿಂಗ್ ನ್ಯೂಸ್
05-11-22 11:20 pm HK News Desk ಕರಾವಳಿ
ಬಳ್ಳಾರಿ, ನ.5: ಮೊನ್ನೆಯಷ್ಟೇ ಬಿಜೆಪಿಯವರು ನನಗೆ ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ತನ್ನನ್ನು ಹುಲಿಗೆ ಹೋಲಿಸಿಕೊಂಡಿದ್ದಾರೆ. ಹುಲಿ ಬೇಟೆಯಾಡಲು ಒಮ್ಮೆ ಸಿದ್ಧವಾದರೆ ಬೇಟೆ ಆಡಿಯೇ ತೀರುತ್ತದೆ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ನಗರದಲ್ಲಿ ಪಾಲಿಕೆ ಸದಸ್ಯ ಎಂ.ಗೋವಿಂದರಾಜುಲು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ ಮಾತನಾಡಿದರು. ಹುಲಿ ಹಸಿವಾದಾಗ ಆಹಾರ ಎಷ್ಟು ಬೇಕೋ ಅಷ್ಟು ಸೇವಿಸುತ್ತದೆ. ಆಹಾರಕ್ಕಾಗಿ ಅದು ಬೇಟೆಯಾಡುತ್ತದೆ. ನಮ್ಮ ರಕ್ತ ಕೂಡ ಅಂತಹದ್ದು. ನಮ್ಮ ತಂದೆ ಪೊಲೀಸ್ ಪೇದೆ ಆಗಿ ಕೆಲಸ ಆಗಿರಬಹುದು. ಆದರೆ ನನ್ನ ತಾತಂದಿರು ರಾಜರಂತೆ ಬದುಕಿದವರು, ಅವರ ರಕ್ತ ನನ್ನಲ್ಲಿದೆ, ಅದನ್ನು ಬದಲಿಸಲಾಗದು. ಕಳೆದ 12 ವರ್ಷಗಳಿಂದ ನಾನು ಸುಮ್ಮನೇ ಇದ್ದೇನೆ ಎಂದರೆ ನನ್ನ ಕೈಯಿಂದ ಏನೂ ಆಗುವುದಿಲ್ಲ ಎಂದರ್ಥವಲ್ಲ ಎಂದು ಹೇಳಿದರು.
ಕಾಂಗ್ರೆಸ್, ಬಿಜೆಪಿ ಅಂತ ನಾನು ಹೇಳುವುದಿಲ್ಲ. ನಮ್ಮ ಕುಟುಂಬ ಬಳ್ಳಾರಿಯ ಅಭಿವೃದ್ಧಿಗೆ ಬದ್ಧವಾಗಿದೆ. ನಮ್ಮ ಕುಟುಂಬದ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಹೇಳಿದ ರೆಡ್ಡಿ, ನಾನು ಬೆಂಗಳೂರಿನಲ್ಲೇ ಐಷಾರಾಮಿ ಬದುಕು ನಡೆಸಬಹುದು. ಆದರೆ ನನಗೆ ನನ್ನ ಬಳ್ಳಾರಿ ಮುಖ್ಯ.
ನೀವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡಿ, ನನ್ನ ಎಲ್ಲ ಕಷ್ಟಗಳು ಪರಿಹಾರ ಆಗಲಿ. ನ್ಯಾಯಾಲಯದಲ್ಲಿ ನಮ್ಮ ಪ್ರಾಮಾಣಿಕತೆಗೆ ನ್ಯಾಯ ಸಿಗುತ್ತದೆ. ನಿಮ್ಮ ದೃಷ್ಟಿಯಲ್ಲಿ ನಾವು ಯಾವತ್ತೂ ಜನರ ಜೇಬಿಗೆ ಕತ್ತರಿ ಹಾಕಿಲ್ಲ. ಯಾರಿಗೂ ನಾವು ಮೋಸ ಮಾಡಿಲ್ಲ. ಅದೃಷ್ಟದಿಂದ, ದೇವರ ಆಶೀರ್ವಾದದಿಂದ ನಾವು ಮೇಲೆ ಬಂದವರು, ನನ್ನ ಕೊನೆ ಉಸಿರಿರುವರೆಗೂ ನಾನು ಬಳ್ಳಾರಿ ಜನರಿಗಾಗಿ ಮುಡಿಪಾಗಿಡುತ್ತೇನೆ ಎಂದವರು ಹೇಳಿದರು.
ಬಳ್ಳಾರಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು. ಅಂತರಾಷ್ಟ್ರೀಯ ಕ್ರೀಡಾಂಗಣ ಆಗಬೇಕು, ಬಳ್ಳಾರಿಗೆ ರಿಂಗ್ ರೋಡ್ ಆಗಬೇಕೆಂಬುದು ನನ್ನ ಕನಸು ಆಗಿತ್ತು. ನನ್ನ ಅವಧಿಯಲ್ಲಿ ಬಳ್ಳಾರಿಗೆ ಅರ್ಧ ರಿಂಗ್ ರೋಡ್ ಅಭಿವೃದ್ಧಿ ಮಾಡಿದ್ದೆ. ಇನ್ನುಳಿದ ಕೆಲಸಕ್ಕೆ ಕೇಂದ್ರ ಮಂತ್ರಿ ಗಡ್ಕರಿ ಅನುಮೋದನೆ ನೀಡಿದ್ದಾರೆ ಎಂದರು
.
If i make my mind i wont leave fighting slams Janardhana Reddy in Bellari
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am