ಬ್ರೇಕಿಂಗ್ ನ್ಯೂಸ್
05-11-22 11:20 pm HK News Desk ಕರಾವಳಿ
ಬಳ್ಳಾರಿ, ನ.5: ಮೊನ್ನೆಯಷ್ಟೇ ಬಿಜೆಪಿಯವರು ನನಗೆ ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ತನ್ನನ್ನು ಹುಲಿಗೆ ಹೋಲಿಸಿಕೊಂಡಿದ್ದಾರೆ. ಹುಲಿ ಬೇಟೆಯಾಡಲು ಒಮ್ಮೆ ಸಿದ್ಧವಾದರೆ ಬೇಟೆ ಆಡಿಯೇ ತೀರುತ್ತದೆ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ನಗರದಲ್ಲಿ ಪಾಲಿಕೆ ಸದಸ್ಯ ಎಂ.ಗೋವಿಂದರಾಜುಲು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ ಮಾತನಾಡಿದರು. ಹುಲಿ ಹಸಿವಾದಾಗ ಆಹಾರ ಎಷ್ಟು ಬೇಕೋ ಅಷ್ಟು ಸೇವಿಸುತ್ತದೆ. ಆಹಾರಕ್ಕಾಗಿ ಅದು ಬೇಟೆಯಾಡುತ್ತದೆ. ನಮ್ಮ ರಕ್ತ ಕೂಡ ಅಂತಹದ್ದು. ನಮ್ಮ ತಂದೆ ಪೊಲೀಸ್ ಪೇದೆ ಆಗಿ ಕೆಲಸ ಆಗಿರಬಹುದು. ಆದರೆ ನನ್ನ ತಾತಂದಿರು ರಾಜರಂತೆ ಬದುಕಿದವರು, ಅವರ ರಕ್ತ ನನ್ನಲ್ಲಿದೆ, ಅದನ್ನು ಬದಲಿಸಲಾಗದು. ಕಳೆದ 12 ವರ್ಷಗಳಿಂದ ನಾನು ಸುಮ್ಮನೇ ಇದ್ದೇನೆ ಎಂದರೆ ನನ್ನ ಕೈಯಿಂದ ಏನೂ ಆಗುವುದಿಲ್ಲ ಎಂದರ್ಥವಲ್ಲ ಎಂದು ಹೇಳಿದರು.
ಕಾಂಗ್ರೆಸ್, ಬಿಜೆಪಿ ಅಂತ ನಾನು ಹೇಳುವುದಿಲ್ಲ. ನಮ್ಮ ಕುಟುಂಬ ಬಳ್ಳಾರಿಯ ಅಭಿವೃದ್ಧಿಗೆ ಬದ್ಧವಾಗಿದೆ. ನಮ್ಮ ಕುಟುಂಬದ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಹೇಳಿದ ರೆಡ್ಡಿ, ನಾನು ಬೆಂಗಳೂರಿನಲ್ಲೇ ಐಷಾರಾಮಿ ಬದುಕು ನಡೆಸಬಹುದು. ಆದರೆ ನನಗೆ ನನ್ನ ಬಳ್ಳಾರಿ ಮುಖ್ಯ.
ನೀವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡಿ, ನನ್ನ ಎಲ್ಲ ಕಷ್ಟಗಳು ಪರಿಹಾರ ಆಗಲಿ. ನ್ಯಾಯಾಲಯದಲ್ಲಿ ನಮ್ಮ ಪ್ರಾಮಾಣಿಕತೆಗೆ ನ್ಯಾಯ ಸಿಗುತ್ತದೆ. ನಿಮ್ಮ ದೃಷ್ಟಿಯಲ್ಲಿ ನಾವು ಯಾವತ್ತೂ ಜನರ ಜೇಬಿಗೆ ಕತ್ತರಿ ಹಾಕಿಲ್ಲ. ಯಾರಿಗೂ ನಾವು ಮೋಸ ಮಾಡಿಲ್ಲ. ಅದೃಷ್ಟದಿಂದ, ದೇವರ ಆಶೀರ್ವಾದದಿಂದ ನಾವು ಮೇಲೆ ಬಂದವರು, ನನ್ನ ಕೊನೆ ಉಸಿರಿರುವರೆಗೂ ನಾನು ಬಳ್ಳಾರಿ ಜನರಿಗಾಗಿ ಮುಡಿಪಾಗಿಡುತ್ತೇನೆ ಎಂದವರು ಹೇಳಿದರು.
ಬಳ್ಳಾರಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು. ಅಂತರಾಷ್ಟ್ರೀಯ ಕ್ರೀಡಾಂಗಣ ಆಗಬೇಕು, ಬಳ್ಳಾರಿಗೆ ರಿಂಗ್ ರೋಡ್ ಆಗಬೇಕೆಂಬುದು ನನ್ನ ಕನಸು ಆಗಿತ್ತು. ನನ್ನ ಅವಧಿಯಲ್ಲಿ ಬಳ್ಳಾರಿಗೆ ಅರ್ಧ ರಿಂಗ್ ರೋಡ್ ಅಭಿವೃದ್ಧಿ ಮಾಡಿದ್ದೆ. ಇನ್ನುಳಿದ ಕೆಲಸಕ್ಕೆ ಕೇಂದ್ರ ಮಂತ್ರಿ ಗಡ್ಕರಿ ಅನುಮೋದನೆ ನೀಡಿದ್ದಾರೆ ಎಂದರು
.
If i make my mind i wont leave fighting slams Janardhana Reddy in Bellari
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm