ಬ್ರೇಕಿಂಗ್ ನ್ಯೂಸ್
06-11-22 01:07 pm Mangalore Correspondent ಕರಾವಳಿ
ಮಂಗಳೂರು, ನ.6 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಮಧ್ಯ ವಯಸ್ಕ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಗಂಗಾಧರ್ ಮತ್ತು ನೇತ್ರಾವತಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಲಾರಿ ಚಾಲಕ ಹನೀಫ್ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ನೇತ್ರಾವತಿ ಅಂಗವಿಕಲೆಯಾಗಿದ್ದು ಪಜೀರು ನಿವಾಸಿ ರಮೇಶ್ ಆಚಾರ್ಯ ಎಂಬವರ ಪುತ್ರಿ. ಮಂಗಳೂರು ನಗರದಲ್ಲಿ ಖಾಸಗಿ ಉದ್ಯೋಗದಲ್ಲಿದ್ದರು. ಆಕೆ ತನ್ನ ಅಕ್ಕನ ಮಗ ಜ್ಞಾನೇಶ್ (6) ಮತ್ತು ಇನ್ನೊಬ್ಬ ತನ್ನ ಮಗು ಮೋಕ್ಷಾ(4) ಅವರನ್ನು ಜೊತೆಗೆ ಕುಳ್ಳಿರಿಸಿಕೊಂಡು ಪರಿಚಯದ ಗಂಗಾಧರ್ ಅವರ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ನೇತ್ರಾವತಿ ಅವರ ಪತಿ ನಾಲ್ಕು ತಿಂಗಳ ಹಿಂದೆ ತೀರಿಕೊಂಡಿದ್ದರು. ಪರಿಚಯದಲ್ಲಿ ಗಂಗಾಧರ್ ಅವರ ಸ್ಕೂಟರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಗಂಗಾಧರ್ ಜಪ್ಪಿನಮೊಗರು ನಿವಾಸಿಯಾಗಿದ್ದು ಪತ್ನಿ ಮತ್ತು ಮಗನನ್ನು ಹೊಂದಿದ್ದರು.
Mangalore Accident at Kallapu in Konaje two killed on spot including woman after truck rams scooter.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am