ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am