ಬ್ರೇಕಿಂಗ್ ನ್ಯೂಸ್
06-11-22 06:10 pm Mangalore Correspondent ಕರಾವಳಿ
ಉಳ್ಳಾಲ, ನ.6 : ಕಳೆದ ನ.1 ರ ಮಂಗಳವಾರ ರಾತ್ರಿ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಗೆ ನುಗ್ಗಿ ಆರು ಕಾಣಿಕೆ ಹುಂಡಿಯಿಂದ ನಗದು ಕಳವುಗೈದಿದ್ದ ಐನಾತಿ ಖದೀಮನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮೊಡಂಕಾಪು,ಪಲ್ಲಮಜಲು ನಿವಾಸಿ ಮಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು(54) ಬಂಧಿತ ಆರೋಪಿ. ಈತನ ವಿರುದ್ಧ ಕಾರ್ಕಳ ಠಾಣೆಯಲ್ಲಿ ಮೂರು, ಮೂಡುಬಿದ್ರೆ, ಬಂಟ್ವಾಳ ನಗರ ಠಾಣೆಗಳಲ್ಲಿ ತಲಾ ಒಂದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದೆ. ಇತ್ತೀಚೆಗೆ ಬಂಟ್ವಾಳದ ಅಜ್ಜಿಬೆಟ್ಟು ದೇವಸ್ಥಾನ ಒಂದರಲ್ಲೂ ಈತ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ.




ಮಂಗಳವಾರ ಮಧ್ಯರಾತ್ರಿ ವೇಳೆ ಅರ್ಕಾಣ ಜುಮಾ ಮಸೀದಿಯ ಪಕ್ಕದ ಕೋಣೆಯೊಂದರಲ್ಲಿದ್ದ ಪಿಕ್ಕಾಸು, ಹಾರೆಯನ್ನ ಬಳಸಿ ಮಸೀದಿಯ ಆವರಣ ಗೋಡೆಯಲ್ಲಿದ್ದ ಒಟ್ಟು ಆರು ಕಾಣಿಕೆ ಹುಂಡಿಗಳನ್ನ ಒಡೆದು ನಗದು ಕಳವುಗೈಯಲಾಗಿತ್ತು. ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಓರ್ವ ವ್ಯಕ್ತಿಯೇ ಕೈಚಳಕ ತೋರಿದ್ದ ದೃಶ್ಯ ಸೆರೆಯಾಗಿತ್ತು.
ಮೊದಲು ಹೊರಗಿನ ಕಾಣಿಕೆ ಡಬ್ಬಿಯನ್ನು ಮುರಿದ ಕಳ್ಳ ಬಳಿಕ ಹಾರೆಯ ಸಹಾಯದಿಂದ ಮಸೀದಿಯ ಬಾಗಿಲಿನ ಚಿಲಕವನ್ನು ಒಡೆದು ಒಳಗೆ ನುಗ್ಗಿ ಅಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದ. ಅಲ್ಲದೆ ಮಸೀದಿ ಕಚೇರಿಯ ಬಾಗಿಲನ್ನೂ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಯು.ಟಿ ಖಾದರ್ ಅವರು ಭೇಟಿ ನೀಡಿ ಕಳ್ಳತನ ಆರೋಪಿಯನ್ನ ಶೀಘ್ರ ಬಂಧಿಸುವಂತೆ ಕೊಣಾಜೆ ಪೊಲೀಸರಿಗೆ ಆಗ್ರಹಿಸಿದ್ದರು. ಸಿಸಿಟಿವಿ ದಾಖಲೆ ಆಧಾರದಲ್ಲಿ ಕೊಣಾಜೆ ಪೊಲೀಸರು ತನಿಖೆ ನಡೆಸಿ ಖದೀಮ ಇಕ್ಬಾಲನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಜೀರು ಮಸೀದಿಗೆ ಕನ್ನ ಹಾಕಿದ ಕಳ್ಳರು ; ಮಸೀದಿಗೆ ನುಗ್ಗಿ ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ಕಳವು
Mangalore Phajeer mosque robbery accused thief arrested by Konaje police. Six offering boxes of the mosque were broken and stolen but the Konaje police have nabbed the accused as soon as possible.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm