ಬ್ರೇಕಿಂಗ್ ನ್ಯೂಸ್
07-11-22 01:16 pm Udupi Correspondent ಕರಾವಳಿ
ಉಡುಪಿ, ನ.7: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದಾರೆ.
ಈ ವೇಳೆ, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜನಸಂಕಲ್ಪ ಸಮಾವೇಶ ಎರಡು ಸುತ್ತಿನಲ್ಲಿ ನಡೆಯುತ್ತದೆ. ಕರಾವಳಿಯಲ್ಲಿ ಕಾಪುವಿನಿಂದ ಆರಂಭ ಆಗಿದೆ. ನಾಳೆಯಿಂದ ಗದಗ, ಹಾವೇರಿ, ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷ ಸಂಘಟನೆ ಮಾಡುತ್ತೇವೆ. ಜನರಿಂದ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಕಾರ್ಯಕರ್ತರಲ್ಲಿ ಸಮಾವೇಶ ಉತ್ಸಾಹ ಮೂಡಿಸಿದೆ. ಮುಂದೆ ಎರಡು ದಿಕ್ಕಿನಿಂದ ಉತ್ತರ, ದಕ್ಷಿಣ ಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕೇಳಿದ್ದಕ್ಕೆ, ಸಿದ್ದರಾಮಯ್ಯ ಭ್ರಮೆಯಲ್ಲಿ ಇದ್ದಾರೆ. ಹಿಂದೆ ಅವರದೇ ಆಡಳಿತ ಇತ್ತು, ಆಗಲೂ ಇದನ್ನೇ ಹೇಳ್ತಾ ಇದ್ರು. ಯಡಿಯೂರಪ್ಪ, ಕುಮಾರಸ್ವಾಮಿ ಮತ್ತೆ ಸಿಎಂ ಆಗಲ್ಲ ಅಂತ ಅಪ್ಪನ ಹೆಸರಲ್ಲಿ ಆಣೆ ಮಾಡಿದ್ದರು. ಆಗ ಆಡಳಿತದಲ್ಲಿದ್ದರೂ ಮತ್ತೆ ಸೋತಿದ್ದಾರೆ. ಯಡಿಯೂರಪ್ಪ, ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿದ್ದು ಯಾವತ್ತೂ ಸತ್ಯ ಆಗಿಲ್ಲ ಎಂದರು.
ಬಿಜೆಪಿಯಂತ ಭ್ರಷ್ಟ ಸರ್ಕಾರ ನೋಡಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 50 ವರ್ಷ ಅವರು ಪೂರ್ಣ ಭ್ರಷ್ಟಾಚಾರ ಮಾಡಿದ್ದಾರೆ. ಅವರ ಕಾಲದಲ್ಲಿ ಆದ ಭ್ರಷ್ಟಾಚಾರ ಯಾವತ್ತೂ ಆಗಿಲ್ಲ. ಸುಳ್ಳು ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಸುಳ್ಳು. ಕಾಂಗ್ರೆಸ್ ಕಾಲದ ಭ್ರಷ್ಟಾಚಾರದ ಕುರಿತು ತನಿಖೆ ನಡೆಸುತ್ತೇವೆ ಎಂದು ಹೇಳಿದರು.
ರೇಣುಕಾಚಾರ್ಯ ಸೋದರನ ಪುತ್ರನ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ನಾಳೆ ರೇಣುಕಾಚಾರ್ಯ ಅವರನ್ನು ಭೇಟಿ ಆಗುತ್ತೇನೆ. ಅಹವಾಲನ್ನು ಕೇಳುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
Preparing for the Assembly polls in about five months, Karnataka BJP's 'Jana Sankalpa Yatra' led by Chief Minister Basavaraj Bommai and party strongman and parliamentary board member B S Yeduyurappa has now resumed here on Monday. The Yatra will be covering Udupi, and Kitturu-Karnataka districts of Gadag, Haveri, and Belagavi, during the next three days.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm