ಬ್ರೇಕಿಂಗ್ ನ್ಯೂಸ್
07-11-22 09:58 pm Mangalore Correspondent ಕರಾವಳಿ
ಮಂಗಳೂರು, ನ.7: ಮಂಗಳೂರು ನಗರದ ಬಲ್ಮಠದ ಕಲೆಕ್ಟರ್ಸ್ ಗೇಟ್ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗಿನ ರಸ್ತೆಗೆ ಹೊಟೇಲ್ ಉದ್ಯಮಿ, ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರ ಹೆಸರಿಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪಾಲಿಕೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲು ಪರಿಷತ್ತಿನಲ್ಲಿ ಇರಿಸಲಾಗಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಅತ್ತೂರು ಸದಾನಂದ ಶೆಟ್ಟಿ ಅಭಿಮಾನ ಬಳಗದ ವತಿಯಿಂದ ಮಹಾನಗರ ಪಾಲಿಕೆಗೆ ಮನವಿ ನೀಡಲಾಗಿದೆ. ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಗೆ ಈ ವಿಷಯ ಬಂದಿಲ್ಲ. ಪ್ರಸ್ತಾವನೆಯ ಬಗ್ಗೆ ಚರ್ಚಿಸಲು ಪರಿಷತ್ತಿನ ಕಾರ್ಯಸೂಚಿಯಲ್ಲಿ ಇಡಲು ನಿರ್ಣಯಿಸಲಾಗಿದೆ. ಯಾವುದೇ ಸಾರ್ವಜನಿಕ ರಸ್ತೆಗೆ ನಾಮಕರಣ ಮಾಡುವುದಿದ್ದರೂ ಪಾಲಿಕೆಯ ನಗರ ಯೋಜನಾ ಸ್ಥಾಯಿ ಸಮಿತಿಯ ಸದಸ್ಯರು ಪರಿಶೀಲನೆ ನಡೆಸಬೇಕಾಗುತ್ತದೆ. ಆನಂತರ, ನಗರ ಪಾಲಿಕೆಯಲ್ಲಿ ಗೊತ್ತುವಳಿ ಅಂಗೀಕಾರ ಆದಲ್ಲಿ ಅದನ್ನು ಸ್ಥಳೀಯ ಎರಡು ಕನ್ನಡ ದಿನ ಪತ್ರಿಕೆಗಳಲ್ಲಿ ಪ್ರಕಟಿಸಿ, ಆಕ್ಷೇಪಗಳಿದ್ದಲ್ಲಿ ಸ್ವೀಕಾರ ಮಾಡಬೇಕು. ಒಂದು ತಿಂಗಳಲ್ಲಿ ಬರುವ ಸಲಹೆ, ಆಕ್ಷೇಪಗಳ ಬಗ್ಗೆ ಪಾಲಿಕೆಯ ಮುಂದಿನ ಸಭೆಯಲ್ಲಿ ಮಂಡಿಸಬೇಕು. ಚರ್ಚಿಸಿ, ನಿರ್ಣಯ ಕೈಗೊಂಡ ನಂತರ ರಾಜ್ಯ ಸರಕಾರದ ಅನುಮತಿ ಕೋರಿ, ಪ್ರಸ್ತಾವನೆ ಕಳುಹಿಸಿ ಕೊಡಬೇಕಾಗುತ್ತದೆ.
ಸದ್ಯಕ್ಕೆ ಪ್ರಸ್ತಾವನೆ ಮಾತ್ರ ಮಂಡನೆಯಾಗಿದ್ದು, ಮಹಾನಗರ ಪಾಲಿಕೆಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಈ ಹಿಂದೆ ಹಂಪನಕಟ್ಟೆಯ ಲೈಟ್ ಹೌಸ್ ಹಿಲ್ ಹೋಗುವ ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರಿಡುವ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಳೆದ ಚುನಾವಣೆ ಸಂದರ್ಭದಲ್ಲಿ ಬಂಟ ಸಮುದಾಯವನ್ನು ಎತ್ತಿಕಟ್ಟುವ ಪ್ರಯತ್ನಕ್ಕೂ ಈ ವಿವಾದ ನಾಂದಿ ಹಾಡಿತ್ತು. ಈ ಬಾರಿ ಚುನಾವಣೆ ವರ್ಷದಲ್ಲಿಯೇ ಸದಾನಂದ ಶೆಟ್ಟಿ ಹೆಸರಿಡುವ ವಿಚಾರ ಮುನ್ನೆಲೆಗೆ ಬಂದಿದೆ. ಒಂದು ಕಾಲದಲ್ಲಿ ಸದಾನಂದ ಶೆಟ್ಟರು ಕ್ವಾಲಿಟಿ ಹೊಟೇಲ್ ಮೂಲಕ ಶೈನ್ ಆಗುತ್ತಿದ್ದ ರಸ್ತೆಗೆ ಅವರದ್ದೇ ಹೆಸರಿಡಲು ಒಂದು ವರ್ಗ ಮುಂದಾಗಿದೆ. ಸದಾನಂದ ಶೆಟ್ಟಿ ಅವರಿಗೆ ಈ ಬಗ್ಗೆ ಗೊತ್ತಿದೆಯೋ ಇಲ್ಲವೋ. ಅವರು ಬದುಕಿರುವ ಕಾಲದಲ್ಲಿಯೇ ರಸ್ತೆಗೆ ಹೆಸರಿಡುವ ತರಾತುರಿ ಯಾತಕ್ಕೋ ಗೊತ್ತಿಲ್ಲ.
Mangalore Rename Balmatta road after the owner of Quality Hotel and Sridevi college owner K Sadananda Shetty road, MCC to discuss the matter.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm