ಬ್ರೇಕಿಂಗ್ ನ್ಯೂಸ್
09-11-22 05:17 pm HK News Desk ಕರಾವಳಿ
ಮಂಗಳೂರು, ನ.9 : ತಲಪಾಡಿ- ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಸುರತ್ಕಲ್ ಎಂಬಲ್ಲಿ ಅಕ್ರಮವಾಗಿ ಟೋಲ್ ಗೇಟ್ ನಿರ್ಮಿಸಿ ಹಲವು ವರ್ಷಗಳಿಂದ ಕಾನೂನಿಗೆ ವಿರುದ್ಧವಾಗಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕ್ರಮ ವಹಿಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
ಟೋಲ್ ಗೇಟ್ ತೆರವು ಮಾಡುವಂತೆ ಹಲವು ದಿನಗಳಿಂದ ಪ್ರತಿಭಟನಕಾರರು ಸಾರ್ವಜನಿಕರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ. ಸರಕಾರ ಜನರ ಭಾವನೆಗಳಿಗೆ, ಅಭಿಪ್ರಾಯಗಳಿಗೆ ಸ್ಪಂದಿಸಬೇಕಾಗಿದೆ. ಸರಕಾರಗಳೇ ಇದೊಂದು ಅಕ್ರಮ ಟೋಲ್ ಗೇಟ್ ಎಂದು ಶಾಸನ ಸಭೆಯಲ್ಲೇ ಒಪ್ಪಿಕೊಂಡಿದ್ದರೂ, ಟೋಲ್ ಗೇಟ್ ತೆರವು ಮಾಡದಿರುವುದು ಸರಿಯಾದ ಕ್ರಮವಲ್ಲ. ಸರಕಾರವೇ ನಿಯಮವನ್ನು ಉಲ್ಲಂಘಿಸುತ್ತಿದ್ದು, ಕಾನೂನು ಉಲ್ಲಂಘನೆ ಆಗುತ್ತಿರುವುದು ಗಮನಕ್ಕೆ ಬಂದ ನಂತರವೂ ರಸ್ತೆ ಶುಲ್ಕ ಸಂಗ್ರಹ ಮಾಡುತ್ತಿರುವುದು ಕಾನೂನು ಬಾಹಿರ ಮಾತ್ರವಲ್ಲದೆ ಅನೈತಿಕ ಮತ್ತು ಜನವಿರೋಧಿ ನೀತಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ಬಿಜೆಪಿ ಸರಕಾರ ಈಗಾಗಲೇ ಜನರ ಪ್ರಾಣ ಹಿಂಡುವ ನೀತಿಗಳನ್ನು ಅನುಸರಿಸುತ್ತಿದೆ. ನೋಟ್ ಬ್ಯಾನ್, ಜಿಎಸ್ಟಿ ತೆರಿಗೆ, ಅವೈಜ್ಞಾನಿಕ ಲಾಕ್ ಡೌನ್ ಮುಂತಾದವು ಸೇರಿದಂತೆ ತಪ್ಪು ಆರ್ಥಿಕ ನೀತಿಯಿಂದಾಗಿ ಜನರ ಬದುಕು ಬೀದಿಗೆ ಬಂದಿದೆ. ಸಣ್ಣ ವ್ಯಾಪಾರಿಗಳು, ಗುಡಿ ಕೈಗಾರಿಕೆಗಳು ನಷ್ಟದಲ್ಲಿವೆ, ಕಾರ್ಮಿಕರು, ವಿದ್ಯಾವಂತರು ನಿರುದ್ಯೋಗಿಗಳಾಗಿದ್ದಾರೆ. ವಿಪರೀತವಾದ ಬೆಲೆ ಏರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ. ಇದರೊಂದಿಗೆ ಸರಕಾರ ಅಕ್ರಮವಾಗಿ ಟೋಲ್ ಗೇಟ್ ಮೂಲಕ ಜನರ ಸುಲಿಗೆ ಮಾಡುತ್ತಿದೆ. ಇಂತಹ ಅನ್ಯಾಯಗಳನ್ನು ನಿಲ್ಲಿಸಬೇಕು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕರು, ಸಂಘಟನೆಗಳು ಸೇರಿ ನಡೆಸುತ್ತಿರುವ ಪ್ರತಿಭಟನೆಗೆ ಸರಕಾರ ಮನ್ನಣೆ ನೀಡಿ ಟೋಲ್ ಗೇಟ್ ತಕ್ಷಣ ನಿಲ್ಲಿಸಬೇಕು ಎಂದವರು ಒತ್ತಾಯಿಸಿದ್ದಾರೆ.
ಆಮ್ ಆದ್ಮಿ ಪಕ್ಷ ಆರಂಭದಿಂದಲು ಸುರತ್ಕಲ್ ನಲ್ಲಿರುವ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸಿದೆ. ಮಾತ್ರವಲ್ಲದೆ, ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿದ್ಯಾವಂತರ ಜಿಲ್ಲೆಯಲ್ಲಿ ಇಂತಹ ಹಗಲು ದರೋಡೆಗೆ ಅವಕಾಶ ದೊರೆಯಬಾರದಿತ್ತು. ಇದೊಂದು ಅಕ್ರಮ ಟೋಲ್ ಗೇಟ್ ಎಂದು ಸರಕಾರ ಒಪ್ಪಿಕೊಂಡು ಹಲವು ತಿಂಗಳುಗಳೇ ಉರುಳಿವೆ. ತೆರವಿಗೊಂದು ಆದೇಶ ಹೊರಡಿಸಲು ಸರಕಾರ ಯಾಕೆ ವಿಳಂಬ ಮಾಡುತ್ತಿದೆ ಎಂಬುದು ಪ್ರಶ್ನಾರ್ಹವಾಗಿದೆ ಎಂದು ಸಂತೋಷ್ ಕಾಮತ್ ಹೇಳಿದ್ದಾರೆ.
Illegal surathkal toll gate protest, Aam admi party district president Santosh kamath demands for action. State president prithiv reddy is all set to join the day night protest going in surathkal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm