ಬ್ರೇಕಿಂಗ್ ನ್ಯೂಸ್
09-11-22 08:54 pm Mangalore Correspondent ಕರಾವಳಿ
ಮಂಗಳೂರು, ನ.9: ಮಂಗಳೂರು ನಗರದಲ್ಲಿ ಕೆಲವು ಪ್ರದೇಶಗಳು ಕತ್ತಲಾಗುತ್ತಿದ್ದಂತೆ ರೆಡ್ ಲೈಟ್ ಏರಿಯಾವೋ ಅನ್ನುವಂತೆ ಬದಲಾಗುತ್ತದೆ. ಅರೆಬರೆ ಬಟ್ಟೆ ತೊಟ್ಟು ತಮ್ಮ ಮೈಮಾಟ ತೋರಿಸುವ ಮಂಗಳಮುಖಿಯರು ಲಲ್ಲೆಗರೆದು ಗಿರಾಕಿಗಳನ್ನು ತಮ್ಮ ಬುಟ್ಟಿಗೆ ಹಾಕ್ಕೊಳ್ತಿದ್ದಾರೆ. ಜಪ್ಪಿನಮೊಗರಿನ ಸಂಚಾರಿ ಠಾಣೆಯ ಎದುರಲ್ಲೇ ಮಂಗಳಮುಖಿಯರ ಕಾಟ ಹೆಚ್ಚಾಗಿದ್ದು ಸಾರ್ವಜನಿಕರು ರಸ್ತೆ ಬದಿ ಅಡ್ಡಹಾಕುವ ಇವರಿಂದ ಸುಲಿಗೆಗೆ ಒಳಗಾಗುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಕದ್ರಿ ಪಾರ್ಕ್, ಎಜೆ ಆಸ್ಪತ್ರೆಯ ಬಳಿಯಲ್ಲೂ ಇದೇ ರೀತಿ ಮಂಗಳಮುಖಿಯರು ಕಾಟ ಕೊಡುತ್ತಾರೆ. ಇತ್ತೀಚಿನ ಕೆಲವು ದಿನಗಳಿಂದ ಜಪ್ಪಿನಮೊಗರಿನಲ್ಲಿ ಹೆದ್ದಾರಿ ಬದಿಯಲ್ಲೇ ಕೆಲವರು ಅರೆಬರೆ ಬಟ್ಟೆ ತೊಟ್ಟು ಗಿರಾಕಿಗಳತ್ತ ಬಲೆ ಬೀಸುತ್ತಿದ್ದಾರೆ. ಇವರ ವೇಶ್ಯಾವಾಟಿಕೆ ದಂಧೆಗೆ ಲಾರಿ, ಟ್ರಕ್ ಚಾಲಕರು, ಕ್ಲೀನರ್ ಗಳೇ ಟಾರ್ಗೆಟ್. ಕದ್ರಿ, ಕೆಪಿಟಿ ಆಸುಪಾಸು ರಾತ್ರಿ ನಿಲ್ಲಿಸುವ ಟ್ರಕ್ ಚಾಲಕರನ್ನು ಮಂಗಳಮುಖಿಯರು ತಮ್ಮ ಬಲೆಗೆ ಬೀಳಿಸಿ ಸುಲಿಯುತ್ತಿದ್ದಾರೆ. ಜಪ್ಪಿನಮೊಗರಿನಲ್ಲಿ ಈಗ ಸ್ಥಳೀಯ ಕೆಲವರು ಕೂಡ ಖಾಯಂ ಗಿರಾಕಿಗಳಾಗಿದ್ದು, ಇದಕ್ಕಾಗಿ ಕತ್ತಲಾಗುತ್ತಿದ್ದಂತೆ ಅರ್ಧ ಲಂಗ ತೊಟ್ಟು ವಯ್ಯಾರದಲ್ಲಿ ನಿಲ್ಲುವ ಲಲನೆಯರಂತೆ ಇವರು ಗಾಳ ಹಾಕುತ್ತಿದ್ದಾರೆ.


ಹೆದ್ದಾರಿ ಬದಿಯಲ್ಲಿ ಸಣ್ಣ ಮಿಡಿ, ಸ್ಕರ್ಟ್ ಹಾಕಿ ನಿಲ್ಲುವ ಇವರು ಮುಂಬೈನ ರೆಡ್ ಲೈಟ್ ಏರಿಯಾದಲ್ಲಿ ಸರತಿ ನಿಲ್ಲುವ ವೇಶ್ಯೆಯರಂತೆ ತೋರುತ್ತಾರೆ. ಹೆದ್ದಾರಿ ಬದಿಯಲ್ಲಿ ಓಪನ್ನಾಗಿ ಇವರು ದಂಧೆಗಿಳಿಯುತ್ತಿದ್ದರೂ, ಎದುರಲ್ಲೇ ಇರುವ ಸಂಚಾರಿ ಠಾಣೆ ಪೊಲೀಸರ ಕಣ್ಣಿಗೆ ಬಿದ್ದಿಲ್ಲವೋ, ಬೀಳದಂತೆ ನಟಿಸುತ್ತಾರೋ ಗೊತ್ತಿಲ್ಲ. ಸ್ಥಳೀಯ ಕೆಲವರು ಇವರ ವೇಷ ತಿಳಿಯದೆ, ಹತ್ತಿರ ಹೋಗಿ ತಮ್ಮ ಸೊತ್ತುಗಳನ್ನೆಲ್ಲ ಕಳಕೊಂಡಿದ್ದಾರೆ ಎನ್ನುವ ವಿಚಾರಗಳೂ ಹೊರಬೀಳುತ್ತಿವೆ. ಹಗಲಿನಲ್ಲಿ ಟ್ರಾಫಿಕ್ ಸಿಗ್ನಲ್, ಟೋಲ್ ಗೇಟ್ ಆಸುಪಾಸು ಕಾಣಿಸಿಕೊಳ್ಳುವ ಮಂಗಳಮುಖಿಯರು ವಾಹನ ಸವಾರರಿಂದ ಹಣ ಕೀಳುತ್ತಾರೆ. ಹಣ ಕೊಡದೇ ಇದ್ದರೆ, ಶಾಪ ಹಾಕುವ ಮಂದಿಯೂ ಇದ್ದಾರೆ.


ರಾತ್ರಿಯಾಗುತ್ತಿದ್ದಂತೆ ಇವರ ವೇಷ ಬದಲಾಗುತ್ತಿದ್ದು, ವೇಶ್ಯಾವಾಟಿಕೆ ದಂಧೆಗಿಳಿಯುವುದು ಜನಸಾಮಾನ್ಯರು ಭಯಪಟ್ಟು ಸಂಚರಿಸುವ ಸ್ಥಿತಿಯಾಗಿದೆ. ಈ ರೀತಿಯ ಸುಲಿಗೆಕೋರರಿಗೆ ಕಡಿವಾಣ ಹಾಕಲು ಹೆದ್ದಾರಿ ಕಾಯುವ ಪೊಲೀಸರಿಗೆ ಸಾಧ್ಯವಿಲ್ಲವೇ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಮುಂದಿಟ್ಟಿದ್ದಾರೆ.
Transgenders found doing prostitution openly near Jeppinamogaru in Mangalore without fear right opposite to Traffic police station.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm