ಬ್ರೇಕಿಂಗ್ ನ್ಯೂಸ್
12-11-22 12:59 pm Mangalore Correspondent ಕರಾವಳಿ
ಬಂಟ್ವಾಳ, ನ.12 : ಕಾಂತಾರ ಸಿನಿಮಾದ ಬಳಿಕ ತುಳುನಾಡಿನ ದೈವಗಳ ಮಹಿಮೆ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಸಂದರ್ಭದಲ್ಲೇ ದೂರದ ಉಕ್ರೇನ್ ದೇಶದ ಕುಟುಂಬವೊಂದು ತುಳುವರ ಆರಾಧ್ಯ ದೈವ ಕೊರಗಜ್ಜನಿಗೆ ಹರಕೆ ರೂಪದಲ್ಲಿ ಅಗೇಲು ಸೇವೆ ನೀಡಿರುವುದು ಸುದ್ದಿಯಾಗಿದೆ.
ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ಥಳೀಯರ ಸೂಚನೆಯಂತೆ ಕೊರಗಜ್ಜನಿಗೆ ಹರಕೆಯನ್ನು ಹೇಳಿಕೊಂಡಿದ್ದ ಕುಟುಂಬ, ಶುಕ್ರವಾರ ರಾತ್ರಿ ಬಂಟ್ವಾಳ ತಾಲೂಕಿನ ಕುಮ್ಡೇಲುವಿನಲ್ಲಿ ಅಗೆಲು ಸೇವೆಯನ್ನು ನೆರವೇರಿಸಿದೆ. ಕೆಲವು ತಿಂಗಳ ಹಿಂದೆ ಉಕ್ರೇನ್ ನಿಂದ ಭಾರತ ಪ್ರವಾಸ ಕೈಗೊಂಡಿದ್ದ ಉಕ್ರೇನ್ ಪ್ರಜೆಗಳಾದ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಉಡುಪಿಯ ಮಲ್ಪೆ ಕಡಲ ತೀರಕ್ಕೆ ಬಂದಿದ್ದರು. ಈ ಸಂದರ್ಭ ಉಡುಪಿಯ ಗೋಶಾಲೆಗೆ ತೆರಳಿದ್ದ ಆ್ಯಂಡ್ರೋ ಕುಟುಂಬ, ಅಲ್ಲಿ ನಾಡಿ ನೋಡಿ ಔಷಧಿ ಕೊಡುವ ಭಕ್ತಿ ಭೂಷಣ್ ಪ್ರಭೂಜಿಯವರನ್ನು ಭೇಟಿ ಮಾಡಿದ್ದರು.
ಈ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದ ಮಗನ ವಿಚಾರವನ್ನು ಉಕ್ರೇನ್ ದಂಪತಿ ಗುರೂಜಿ ಅವರಲ್ಲಿ ತಿಳಿಸಿದ್ದು, ಅದರಂತೆ ದೇಸಿ ದನದ ಜೊತೆಗೆ ವಿಹಾರ ಸಹಿತ ನಾಟಿ ಚಿಕಿತ್ಸೆ ಆರಂಭಿಸಿದ್ದರು. ಹಾಗಾಗಿ ಕಳೆದ ಮೂರು ತಿಂಗಳಿನಿಂದ ಕುಮ್ಡೇಲುವಿನ ಶ್ರೀ ರಾಧಾ ಸುರಭೀ ಗೋಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಕೃಷ್ಣ ಜನ್ಮಾಷ್ಟಮಿಯ ಸಂದರ್ಭ ಅದೇ ಪರಿಸರದಲ್ಲಿ ನಡೆದಿದ್ದ ಕೊರಗಜ್ಜನ ಕೋಲದಲ್ಲಿ ಮಗನಿಗೆ ಅನಾರೋಗ್ಯಕ್ಕೆ ಪರಿಹಾರ ನೀಡುವಂತೆ ಉಕ್ರೇನ್ ದಂಪತಿ ಕೋರಿಕೊಂಡಿದ್ದಲ್ಲದೆ, ಹುಷಾರಾದಲ್ಲಿ ಅಗೇಲು ಸೇವೆ ನೀಡುವುದಾಗಿ ಹರಕೆ ಹೇಳಿದ್ದರು. ಇದೀಗ ಮಗ ಮ್ಯಾಕ್ಸಿಂ ಗುಣಮುಖನಾಗಿರುವ ಹಿನ್ನೆಲೆ ಕುಟುಂಬ ಶುಕ್ರವಾರ ರಾತ್ರಿ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ.
ಭಕ್ತಿಭೂಷಣ್ ದಾಸ್ ಪ್ರಭೂಜಿ, ಪದ್ಮನಾಭ ಗೋವಿನ ತೋಟ, ರಾಮಚಂದ್ರ ಮಾರಿಪಳ್ಳ, ಯಾದವ ಕೊಡಂಗೆ, ನವೀನ್ ಮಾರ್ಲ ಮೊದಲಾದವರ ಉಪಸ್ಥಿತಿಯಲ್ಲಿ ಅಗೇಲು ಸೇವೆ ನಡೆದಿದ್ದು, ಉಕ್ರೇನ್ ಕುಟುಂಬವೂ ಸಂತೃಪ್ತ ಮನೋಭಾವದಿಂದ ಅಗೇಲು ಸೇವೆಯಲ್ಲಿ ಭಾಗವಹಿಸಿತ್ತು.
Son unwell, Ukraine couple visited Tulunadu Koragajja Temple for healing, perform Agelu seve in Bantwal Mangalore.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am