ಬ್ರೇಕಿಂಗ್ ನ್ಯೂಸ್
12-11-22 12:59 pm Mangalore Correspondent ಕರಾವಳಿ
ಬಂಟ್ವಾಳ, ನ.12 : ಕಾಂತಾರ ಸಿನಿಮಾದ ಬಳಿಕ ತುಳುನಾಡಿನ ದೈವಗಳ ಮಹಿಮೆ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಸಂದರ್ಭದಲ್ಲೇ ದೂರದ ಉಕ್ರೇನ್ ದೇಶದ ಕುಟುಂಬವೊಂದು ತುಳುವರ ಆರಾಧ್ಯ ದೈವ ಕೊರಗಜ್ಜನಿಗೆ ಹರಕೆ ರೂಪದಲ್ಲಿ ಅಗೇಲು ಸೇವೆ ನೀಡಿರುವುದು ಸುದ್ದಿಯಾಗಿದೆ.
ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ಥಳೀಯರ ಸೂಚನೆಯಂತೆ ಕೊರಗಜ್ಜನಿಗೆ ಹರಕೆಯನ್ನು ಹೇಳಿಕೊಂಡಿದ್ದ ಕುಟುಂಬ, ಶುಕ್ರವಾರ ರಾತ್ರಿ ಬಂಟ್ವಾಳ ತಾಲೂಕಿನ ಕುಮ್ಡೇಲುವಿನಲ್ಲಿ ಅಗೆಲು ಸೇವೆಯನ್ನು ನೆರವೇರಿಸಿದೆ. ಕೆಲವು ತಿಂಗಳ ಹಿಂದೆ ಉಕ್ರೇನ್ ನಿಂದ ಭಾರತ ಪ್ರವಾಸ ಕೈಗೊಂಡಿದ್ದ ಉಕ್ರೇನ್ ಪ್ರಜೆಗಳಾದ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಉಡುಪಿಯ ಮಲ್ಪೆ ಕಡಲ ತೀರಕ್ಕೆ ಬಂದಿದ್ದರು. ಈ ಸಂದರ್ಭ ಉಡುಪಿಯ ಗೋಶಾಲೆಗೆ ತೆರಳಿದ್ದ ಆ್ಯಂಡ್ರೋ ಕುಟುಂಬ, ಅಲ್ಲಿ ನಾಡಿ ನೋಡಿ ಔಷಧಿ ಕೊಡುವ ಭಕ್ತಿ ಭೂಷಣ್ ಪ್ರಭೂಜಿಯವರನ್ನು ಭೇಟಿ ಮಾಡಿದ್ದರು.
ಈ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದ ಮಗನ ವಿಚಾರವನ್ನು ಉಕ್ರೇನ್ ದಂಪತಿ ಗುರೂಜಿ ಅವರಲ್ಲಿ ತಿಳಿಸಿದ್ದು, ಅದರಂತೆ ದೇಸಿ ದನದ ಜೊತೆಗೆ ವಿಹಾರ ಸಹಿತ ನಾಟಿ ಚಿಕಿತ್ಸೆ ಆರಂಭಿಸಿದ್ದರು. ಹಾಗಾಗಿ ಕಳೆದ ಮೂರು ತಿಂಗಳಿನಿಂದ ಕುಮ್ಡೇಲುವಿನ ಶ್ರೀ ರಾಧಾ ಸುರಭೀ ಗೋಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಕೃಷ್ಣ ಜನ್ಮಾಷ್ಟಮಿಯ ಸಂದರ್ಭ ಅದೇ ಪರಿಸರದಲ್ಲಿ ನಡೆದಿದ್ದ ಕೊರಗಜ್ಜನ ಕೋಲದಲ್ಲಿ ಮಗನಿಗೆ ಅನಾರೋಗ್ಯಕ್ಕೆ ಪರಿಹಾರ ನೀಡುವಂತೆ ಉಕ್ರೇನ್ ದಂಪತಿ ಕೋರಿಕೊಂಡಿದ್ದಲ್ಲದೆ, ಹುಷಾರಾದಲ್ಲಿ ಅಗೇಲು ಸೇವೆ ನೀಡುವುದಾಗಿ ಹರಕೆ ಹೇಳಿದ್ದರು. ಇದೀಗ ಮಗ ಮ್ಯಾಕ್ಸಿಂ ಗುಣಮುಖನಾಗಿರುವ ಹಿನ್ನೆಲೆ ಕುಟುಂಬ ಶುಕ್ರವಾರ ರಾತ್ರಿ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ.
ಭಕ್ತಿಭೂಷಣ್ ದಾಸ್ ಪ್ರಭೂಜಿ, ಪದ್ಮನಾಭ ಗೋವಿನ ತೋಟ, ರಾಮಚಂದ್ರ ಮಾರಿಪಳ್ಳ, ಯಾದವ ಕೊಡಂಗೆ, ನವೀನ್ ಮಾರ್ಲ ಮೊದಲಾದವರ ಉಪಸ್ಥಿತಿಯಲ್ಲಿ ಅಗೇಲು ಸೇವೆ ನಡೆದಿದ್ದು, ಉಕ್ರೇನ್ ಕುಟುಂಬವೂ ಸಂತೃಪ್ತ ಮನೋಭಾವದಿಂದ ಅಗೇಲು ಸೇವೆಯಲ್ಲಿ ಭಾಗವಹಿಸಿತ್ತು.
Son unwell, Ukraine couple visited Tulunadu Koragajja Temple for healing, perform Agelu seve in Bantwal Mangalore.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm